ಬೇರೊಬ್ಬರ ಜತೆ ಬೈಕಿನಲ್ಲಿ ಹೋಗುತ್ತಿದ್ದ ಹೆಂಡ್ತಿಯನ್ನ ನೆಲಕ್ಕೆ ಬೀಳಿಸಿ ಮಚ್ಚಿನಿಂದ ಮನಬಂದಂತೆ ಹೊಡೆದ ಪತಿ
ಹಾಡಹಗಲೇ ನಡುರಸ್ತೆಯಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಪತಿ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಆನಂದ ಟಾಕೀಸ್ ಬಳಿ ನಡೆದಿದೆ. ಸಿಂದಗಿ ತಾಲೂಕಿನ ಕೆರುಟಗಿ ನಿವಾಸಿ ಯಮನಪ್ಪ(60) ಮಚ್ಚಿನಿಂದ ತನ್ನ ಪತ್ನಿ ಅನಸೂಯ ಮಾದಾರ್(50) ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ. ಸಾರ್ವಜನಿಕರು ತಡೆಯಲು ಬಂದವರಿಗೆ ಯಮನಪ್ಪ ಅವಾಜ್ ಹಾಕಿ ಮನಬಂದಂತೆ ಮಚ್ಚಿನಿಂದ ದಾಳಿ ಮಾಡಿದ್ದಾನೆ.ಕೊನೆಗೆ ಸಾರ್ವಜನಿಕರು ಯಮನಪ್ಪನಿಗೆ ಕಲ್ಲು ಹಾಗೂ ಕಟ್ಟಿಗೆಯಿಂದ ಹೊಡೆದು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡುವ ಭಯಾನಕ ವಿಡಿಯೋ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸದ್ಯ ಗಾಯಾಳು ಅನಸೂಯ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಜಯಪುರ, (ಅಕ್ಟೋಬರ್ 24): ಹಾಡಹಗಲೇ ನಡುರಸ್ತೆಯಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಪತಿ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಆನಂದ ಟಾಕೀಸ್ ಬಳಿ ನಡೆದಿದೆ. ಸಿಂದಗಿ ತಾಲೂಕಿನ ಕೆರುಟಗಿ ನಿವಾಸಿ ಯಮನಪ್ಪ(60) ಮಚ್ಚಿನಿಂದ ತನ್ನ ಪತ್ನಿ ಅನಸೂಯ ಮಾದಾರ್(50) ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ. ಸಾರ್ವಜನಿಕರು ತಡೆಯಲು ಬಂದವರಿಗೆ ಯಮನಪ್ಪ ಅವಾಜ್ ಹಾಕಿ ಮನಬಂದಂತೆ ಮಚ್ಚಿನಿಂದ ದಾಳಿ ಮಾಡಿದ್ದಾನೆ.ಕೊನೆಗೆ ಸಾರ್ವಜನಿಕರು ಯಮನಪ್ಪನಿಗೆ ಕಲ್ಲು ಹಾಗೂ ಕಟ್ಟಿಗೆಯಿಂದ ಹೊಡೆದು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡುವ ಭಯಾನಕ ವಿಡಿಯೋ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸದ್ಯ ಗಾಯಾಳು ಅನಸೂಯ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Latest Videos
ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
