AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೃದ್ಧರೊಬ್ಬರು ಹೃದಯಾಘಾರಕ್ಕೊಳಗಾಗಿ ನಿಧನರಾದರು

ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೃದ್ಧರೊಬ್ಬರು ಹೃದಯಾಘಾರಕ್ಕೊಳಗಾಗಿ ನಿಧನರಾದರು

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Sep 10, 2022 | 6:05 PM

Share

ಕಾರ್ಯಕ್ರಮ ನಡೆಯುವಾಗ ಕುಸಿದುಬಿದ್ದ ಸಿದ್ದಲಿಂಗಪ್ಪನವರನ್ನು ಕೂಡಲೇ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ ಮಾರ್ಗ ಮಧ್ಯದಲ್ಲೇ ಅವರ ಪ್ರಾಣಪಕ್ಷಿ ಹಾರಿಹೋಯಿತು.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ (Doddaballapura) ಶನಿವಾರ ನಡೆದ ಬಿಜೆಪಿಯ ಅದ್ದೂರಿ ಜನಸ್ಪಂದನ (Janaspandana) ಕಾರ್ಯಕ್ರಮದಲ್ಲಿ ವೃದ್ಧರೊಬ್ಬರು ಹೃದಯಾಘಾತಕ್ಕೊಳಗಾಗಿ (heart attack) ಮೃತಪಟ್ಟಿದ್ದಾರೆ. ಮೃತವ್ಯಕ್ತಿಯನ್ನು ತುಮಕೂರಿನ ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದೆ. ಕಾರ್ಯಕ್ರಮ ನಡೆಯುವಾಗ ಕುಸಿದುಬಿದ್ದ ಸಿದ್ದಲಿಂಗಪ್ಪನವರನ್ನು ಕೂಡಲೇ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ ಮಾರ್ಗ ಮಧ್ಯದಲ್ಲೇ ಅವರ ಪ್ರಾಣಪಕ್ಷಿ ಹಾರಿಹೋಯಿತು.