AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಣ್ಣಾಮಲೈ ಮಾತಿಗೆ ಭಾವುಕರಾಗಿ ವೇದಿಕೆಯ ಮೇಲೆ ಕಣ್ಣೀರು ಹಾಕಿದ ಜಿಗಜಿಣಗಿ

ವಿಜಯಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರ ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿರುವ ಅಣ್ಣಾಮಲೈ ಅವರು ಅಬ್ಬರದ ಮತಪ್ರಚಾರ ಮಾಡಿದರು. ಈ ವೇಳೆ ಮಾತನಾಡಿದ ಅಣ್ಣಾಮಲೈ ಬಿಜೆಪಿಯ ಸಾಧನೆ ಹಾಗೂ ರಮೇಶ್ ಜಿಗಜಿಣಗಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಿದರು. ಅಣ್ಣಾಮಲೈ ಅವರ ಮಾತುಗಳನ್ನು ಕೇಳುತ್ತಿದ್ದಂತೆ ಭಾವುಕರಾಗಿ ವೇದಿಕೆಯ ಮೇಲೆ ಜಿಗಜಿಣಗಿ ಕಣ್ಣೀರು ಹಾಕಿದರು.

Follow us
ಅಕ್ಷತಾ ವರ್ಕಾಡಿ
|

Updated on:May 03, 2024 | 10:30 AM

ವಿಜಯಪುರ(ಮೇ.03): ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿರುವ ಅಣ್ಣಾಮಲೈ ಅವರು ನಿನ್ನೆ (ಮೇ.02)ರಂದು ವಿಜಯಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರ ಭರ್ಜರಿ ಮತಪ್ರಚಾರ ನಡೆಸಿದರು. ನಗರದ ಮೀನಾಕ್ಷಿ ಚೌಕಿಯಲ್ಲಿ ನಡೆದ ಬಿಜೆಪಿ ಯುವ ಸಮಾವೇಶದಲ್ಲಿ ಮಾತನಾಡಿದ ಅಣ್ಣಾಮಲೈ ಬಿಜೆಪಿಯ ಸಾಧನೆ ಹಾಗೂ ರಮೇಶ್ ಜಿಗಜಿಣಗಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಿದರು. ವಿಜಯಪುರದಲ್ಲಿ ಬೈಕ್ ರ್ಯಾಲಿ, ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳುವುದಕ್ಕೂ ಮೊದಲು ಮಾತನಾಡಿರುವ ಅಣ್ಣಾಮಲೈ, ಲೋಕಸಭೆ ಚುನಾವಣೆಯಲ್ಲಿ ಮೋದಿಜೀ ಪ್ರಧಾನಿಯಾಗಲು ನೀವು ಬಯಸಿದರೆ, ಭವಿಷ್ಯದಲ್ಲಿ ಉತ್ತಮ ಭಾರತಕ್ಕಾಗಿ ವಿಜಯಪುರದಲ್ಲಿ ಜಿಗಜಿಣಗಿ ಅವರಿಗೆ ನಿಮ್ಮ ಅತ್ಯಮೂಲ್ಯವಾದ ಮತ ನೀಡಿ ಎಂದು ಹೇಳಿದರು. ಈ ವೇಳೆ ಅಣ್ಣಾಮಲೈ ಮಾತಿಗೆ ಭಾವುಕರಾದ ರಮೇಶ್ ಜಿಗಜಿಣಗಿ ವೇದಿಕೆಯ ಮೇಲೆ ಕಣ್ಣೀರು ಹಾಕಿದ್ದಾರೆ. BLDE ಇಂಜಿನಿಯರಿಂಗ್ ಕಾಲೇಜಿನಿಂದ ತೆರೆದ ವಾಹನದಲ್ಲಿ ಜಿಗಜಿಣಗಿ ಪರ ಅಣ್ಣಾಮಲೈ ಮತಯಾಚನೆ ಮಾಡಿದರು. ಇದಲ್ಲದೆ ಸಿದ್ದೇಶ್ವರ ಆಶ್ರಮಕ್ಕೆ ಭೇಟಿ ನೀಡಿ ಆರ್ಶೀವಾದ ಪಡೆದ ಅಣ್ಣಾಮಲೈ ಭಾರತದ ದಕ್ಷಿಣ ಪ್ರದೇಶಗಳಲ್ಲೂ ಬಿಜೆಪಿನ್ನು ಜನತೆ ಒಪ್ಪುತ್ತಿದ್ದು, ಈ ಪ್ರದೇಶದಲ್ಲಿ ಪಕ್ಷ 110 ರಿಂದ 160 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಮ್ಮ ಗಂಡು ನರೇಂದ್ರ ಮೋದಿ, ಕಾಂಗ್ರೆಸ್ ನಲ್ಲಿ ಮದುವೆ ಗಂಡು ಇಲ್ಲ: ಸಿಟಿ ರವಿ

Published On - 10:27 am, Fri, 3 May 24

ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ