ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ರಾಜ್ಯಾಧ್ಯಕ್ಷನ ಚುನಾವಣೆ ಬಗ್ಗೆ ಚರ್ಚೆ ಆಗಿಲ್ಲ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Jan 21, 2025 | 9:12 PM

ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲು ಬಿಜೆಪಿ ಎರಡು ವಿಧಾನಗಳನ್ನು ಅನುಸರಿಸುತ್ತದೆ, ಸರ್ವಸಮ್ಮತಿಯ ಆಯ್ಕೆ ಮತ್ತು ಚುನಾವಣೆ ಎಂದು ಅಶೋಕ ಹೇಳಿದರು. ಯಾವುದಕ್ಕೂ ಶಿವರಾಜ್ ಸಿಂಗ್ ಚೌಹಾನ್ ಅವರ ನಿರ್ಣಯವೇ ಅಂತಿಮವಾಗಿರುತ್ತದೆ, ಅವರು ಆಯ್ಕೆ ಮಾಡಿ ಅನುಮೋದನೆಗಾಗಿ ವರಿಷ್ಠರಿಗೆ ಕಳಿಸುತ್ತಾರೆ, ವರಿಷ್ಠರು ತೆಗೆದುಕೊಳ್ಳುವ ನಿರ್ಣಯವನ್ನು ಶಿರಸಾವಹಿಸಿ ಪಾಲಿಸುತ್ತೇವೆ ಎಂದು ಅಶೋಕ ಹೇಳಿದರು.

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್​ದಾಸ್ ಅಗರ್ವಾಲ್ ನೇತೃತ್ವದಲ್ಲಿ ನಡೆದ ಚುನಾಯಿತ ಪ್ರತಿನಿಧಿಗಳ ಸಭೆಯ ನಂತರ ಮಾತಾಡಿದ ಅರ್ ಅಶೋಕ, ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಮತ್ತು ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಚುನಾವಣೆಗೆ ಸಂಬಂಧಿಸಿದಂತೆ ಮಾತ್ರ ಚರ್ಚೆ ನಡೆಯಿತು, ರಾಜ್ಯಾಧ್ಯಕ್ಷರ ನೇಮಕಾತಿ ಅಥವಾ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿಲ್ಲ, ರಾಜ್ಯಾಧ್ಯಕ್ಷರ ಚುನಾವಣೆಗೆಂದು ವರಿಷ್ಠರು ಶಿವರಾಜ್ ಸಿಂಗ್ ಚೌಹಾನ್ ಅವರನ್ನು ಉಸ್ತುವಾರಿಯಾಗಿ ನೇಮಿಸಿದ್ದಾರೆ ಅವರು ಬಂದ ಮೇಲೆ ಪ್ರಕ್ರಿಯೆ ಶುರುವಾಗುತ್ತದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಈಗಿರುವ ಗಾಂಧಿಗಳು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆಯೇ? ನಕಲಿ ಗಾಂಧಿಗಳ ಜಾತ್ರೆ ನಡೆಯುತ್ತಿದೆ: ಅಶೋಕ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.