‘ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ’: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್

Edited By:

Updated on: Sep 20, 2026 | 7:58 PM

ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಈ ವ್ಯವಸ್ಥೆಯಲ್ಲಿ ಭಾಗವಹಿಸಿರುವವರು ಮೊದಲೇ ದೂರವಿರಬೇಕಿತ್ತು ಎಂದ ಮಹದೇವಪ್ಪ, ಪ್ರಜಾಪ್ರಭುತ್ವ ಸುಧಾರಣೆಗೆ ಚುನಾವಣಾ ಆಯೋಗ, ರಾಜ್ಯ ಚುನಾವಣಾ ನಿಧಿ ಹಾಗೂ ಮತದಾರರು ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದ್ದಾರೆ. ಹಣಕ್ಕಾಗಿ ಮತ ಮಾರಾಟ ಮಾಡದಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ದಾವಣಗೆರೆ, ಸೆಪ್ಟೆಂಬರ್​​ 20: ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಟಾಂಗ್ ಕೊಟ್ಟಿದ್ದಾರೆ. ಈ ರೀತಿಯಾಗಿ ಹೇಳುವವರು ಮೊದಲೇ ಇಂಥ ಚುನಾವಣಾ ವ್ಯವಸ್ಥೆಯಿಂದ ದೂರ ಇರಬೇಕಿತ್ತು. ನಾವು ಈಗಾಗಲೇ ಇಂತಹ ವ್ಯವಸ್ಥೆಯಲ್ಲಿ ಬಂದು ಬಿಟ್ಟಿದ್ದೇವೆ. ಸಂವಿಧಾನ ಜಾರಿ ಬಂದಾಗಲೇ‌ ಕೃಪಲಾನಿಯಂತವರು ಅಂಬೇಡ್ಕರ್​​ಗೆ ಪ್ರಶ್ನೆ ಮಾಡಿದ್ದರು. ಹಣ ಕೊಟ್ಟು ಮತ ಖರೀದಿಸುತ್ತೇವೆ ಎಂದಿದ್ದರು. ಇಂತಹ ಚಿಂತನೆಗಳು ‌ಮೊದಲಿನಿಂದಲು ನಡೆದುಕೊಂಡು ಬಂದಿವೆ. ಇದು ಸುಧಾರಣೆ ಆಗಬೇಕಿದ್ದರೆ ಚುನಾವಣಾ ಆಯೋಗ ಮಹತ್ವದ ಹೆಜ್ಜೆ ಇಡಬೇಕು ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us