AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಎತ್ತರದ ಅಪಾರ್ಟ್ಮೆಂಟ್​​ ಮೇಲೆ ಸಿಲುಕಿಕೊಂಡ ಬೆಕ್ಕು, ಅಗ್ನಿಶಾಮಕ ದಳದ ಕಾರ್ಯಚರಣೆ ಹೇಗಿತ್ತು?

Video: ಎತ್ತರದ ಅಪಾರ್ಟ್ಮೆಂಟ್​​ ಮೇಲೆ ಸಿಲುಕಿಕೊಂಡ ಬೆಕ್ಕು, ಅಗ್ನಿಶಾಮಕ ದಳದ ಕಾರ್ಯಚರಣೆ ಹೇಗಿತ್ತು?

ಅಕ್ಷಯ್​ ಪಲ್ಲಮಜಲು​​
|

Updated on: Dec 29, 2025 | 3:12 PM

Share

ಚಂದಾಪುರದ ಮಹೇಂದ್ರ ಆರ್ಯ ಅಪಾರ್ಟ್ಮೆಂಟ್‌ನ ಕಿಟಕಿಯ ಸಜ್ಜದ ಮೇಲೆ ಸಿಲುಕಿದ್ದ ಬೆಕ್ಕನ್ನು ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ದಳ ಯಶಸ್ವಿಯಾಗಿ ರಕ್ಷಿಸಿದೆ. ಬೆಕ್ಕು ಹೊರಬರಲಾಗದೆ ಪರದಾಡುತ್ತಿದ್ದು, ಅದರ ಕಿರುಚಾಟ ಕೇಳಿ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದರು. ಅಗ್ನಿಶಾಮಕ ಅಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬೆಕ್ಕನ್ನು ಸುರಕ್ಷಿತವಾಗಿ ರಕ್ಷಿಸಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. ಈ ಮಾನವೀಯ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಬೆಂಗಳೂರು, ಡಿ.29: ಅಪಾರ್ಟ್ಮೆಂಟ್​​​ನ ಕಿಟಕಿ ಮೇಲೆ ಸಿಲುಕಿದ್ದ ಬೆಕ್ಕನ್ನು ಅಗ್ನಿಶಾಮಕ ತಂಡ ಕಾಪಾಡಿರುವ ಘಟನೆ ಚಂದಾಪುರದ ಹೀಲಲಿಗೆ ಸಮೀಪದ ಮಹೇಂದ್ರ ಆರ್ಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ತಂಡ ಬೆಕ್ಕಿನ ರಕ್ಷಣೆ ಮಾಡಲಾಗಿದೆ. ಪ್ಲಾಟ್​​​ ಹೊರೆಗೆ ಇರುವ ಕಿಟಕಿಯ ಸಜ್ಜದ ಮೇಲೆ ಹೋಗಿ ಕೂತಿದೆ. ಅಲ್ಲಿಂದ ಹೊರಬರಲಾಗದೆ ಬೆಕ್ಕು ಪರದಾಟ ಮಾಡಿದೆ. ಬೆಕ್ಕಿನ ಕಿರುಚಾಟ ಕೇಳಿ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ, ಬೆಕ್ಕನ್ನ ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಅಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ನಂತರ ಮಗುವಿನಂತೆ ಅಪ್ಪಿಕೊಂಡು ಬೆಕ್ಕನ್ನು ಎತ್ತಿಕೊಂಡು ಮಾಲೀಕರು ಮುದ್ದಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More