ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ

ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
| Updated By: ವಿವೇಕ ಬಿರಾದಾರ

Updated on: Jul 07, 2024 | 8:23 AM

ಸಫಾರಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಕಾಡಿನ ಮಧ್ಯೆ ಸಫಾರಿ ಹೋಗುತ್ತಿದ್ದರೆ ಅದರ ಮಜಾನೇ ಬೇರೆ. ಆದರೆ, ಸಫಾರಿ ವೇಳೆ ಅದೆಷ್ಟೊ ವೇಳೆ ಪ್ರಾಣಿಗಳು ದಾಳಿ ಮಾಡಿವೆ. ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ದಮ್ಮನಕಟ್ಟೆ ಸಫಾರಿಗೆ ತೆರಳಿದ ವೇಳೆ ಪ್ರವಾಸಿಗರಿಗೆ ಶಾಕ್​ ಕಾದಿತ್ತು.

ಮೈಸೂರು, ಜುಲೈ 07: ಸಫಾರಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಕಾಡಿನ ಮಧ್ಯೆ ಸಫಾರಿ ಹೋಗುತ್ತಿದ್ದರೆ ಅದರ ಮಜಾನೇ ಬೇರೆ. ಸಫಾರಿ ಮಾಡುತ್ತಿರುವಾಗ ಪ್ರಾಣಿಗಳು ಕಂಡರಂತೂ ಪೋಟೋ, ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವವರೆಗೂ ಸಮಾಧಾನ ಆಗಲ್ಲ. ಆದರೆ, ಸಫಾರಿ ವೇಳೆ ಪ್ರಾಣಿಗಳು ಅಟ್ಯಾಕ್​ ಮಾಡಿದರೆ ಏನು ಗತಿ? ಹೌದು, ಸಫಾರಿ ವೇಳೆ ಅದೆಷ್ಟೋ ವೇಳೆ ಪ್ರಾಣಿಗಳು ದಾಳಿ ಮಾಡಿವೆ. ಇದೇರೀತಿ, ಹೆಚ್.ಡಿ ಕೋಟೆ (HD Kote) ತಾಲೂಕಿನ ದಮ್ಮನಕಟ್ಟೆ (Dumannakatte) ಸಫಾರಿಗೆ (Safari) ತೆರಳಿದ ವೇಳೆ ಆನೆ ಆಟ್ಯಾಕ್ ಮಾಡಿದೆ, ಮತ್ತೊಂದು ಕಡೆ ಎರಡೆರಡು ಹುಲಿಗಳ ದರ್ಶನವಾಗಿದೆ. ಪ್ರವಾಸಿಗರು ದಮ್ಮನಕಟ್ಟೆ ಸಫಾರಿ ಕೇಂದ್ರದಿಂದ ಸಫಾರಿಗೆ ತೆರಳಿದರು. ಈ ವೇಳೆ ಟೆಂಪಲ್‌ ಟ್ಯಾಂಕ್ ಬಳಿ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ. ಚಾಲಕ ಒಂಟಿ‌ ಸಲಗ ಕಂಡು ಸಫಾರಿ ವಾಹನ ನಿಲ್ಲಿಸಿದ್ದಾನೆ. ಈ ವೇಳೆ ಗಜರಾಜ ಏಕಾಏಕಿ ಆಟ್ಯಾಕ್ ಮಾಡಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಇದೇ ವೇಳೆ ಎರಡು ಹುಲಿಗಳ ದರ್ಶನ ಕೂಡ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ