ಘೀಳಿಡುತ್ತಾ ಕಾರನ್ನು ಅಟ್ಟಾಡಿಸಿದ ಒಂಟಿ ಸಲಗ: ಬೆಚ್ಚಿದ ಪ್ರವಾಸಿಗರು, ಸ್ವಲ್ಪದರಲ್ಲೇ ಪಾರು

Edited By:

Updated on: Jan 27, 2026 | 9:53 AM

ಪ್ರವಾಸಿಗರ ಕಾರಿನ ಮೇಲೆ ಒಂಟಿ ಸಲಗ ದಾಳಿ ಮಾಡಲು ಮುಂದಾದ ಘಟನೆ ಕರ್ನಾಟಕ–ತಮಿಳುನಾಡು ಗಡಿ ಭಾಗದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಜನರು ಅನಗತ್ಯವಾಗಿ ರಸ್ತೆ ಬಳಿ ನಿಲ್ಲದಂತೆ ಹಾಗೂ ಸಲಗವನ್ನು ಪ್ರಚೋದಿಸದಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಚಾಮರಾಜನಗರ, ಜನವರಿ 27: ಕರ್ನಾಟಕ–ತಮಿಳುನಾಡು ಗಡಿ ಭಾಗದಲ್ಲಿ ಒಂಟಿ ಸಲಗದ ಉಪಟಳ ಮತ್ತೆ ಆತಂಕ ಮೂಡಿಸಿದೆ. ತಮಿಳುನಾಡಿನ ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯದ ಮುಖ್ಯ ರಸ್ತೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದ ಘಟನೆಯಲ್ಲಿ, ಒಂಟಿ ಸಲಗವು ಪ್ರಯಾಣಿಕರ ಕಾರನ್ನು ಅಟ್ಟಾಡಿಸಿದೆ. ಕಾಡಿನೊಳಗಿಂದ ಹೊರಬಂದ ಸಲಗವು ರಸ್ತೆ ಮೇಲೆ ಸಂಚರಿಸುತ್ತಿದ್ದ ವಾಹನಗಳತ್ತ ದಾಳಿ ಮಾಡಲು ಯತ್ನಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ.

ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯವು ಬಿಳಿಗಿರಿ ಟೈಗರ್ ರಿಸರ್ವ್ ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶವಾಗಿದ್ದು, ಈ ಭಾಗದಲ್ಲಿ ಒಂಟಿ ಸಲಗದ ಸಂಚಾರ ಆಗಾಗ ಕಂಡುಬರುತ್ತಿದೆ. ಕಾಡಿನಿಂದ ಹೊರಬಂದು ಮುಖ್ಯ ರಸ್ತೆಗೆ ಬರುವ ಸಲಗದಿಂದ ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.

ಒಂಟಿ ಸಲಗವು ಯಾವ ಕ್ಷಣದಲ್ಲಾದರೂ ಕರ್ನಾಟಕ ಗಡಿ ದಾಟಿ ಪ್ರವೇಶಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಕರ್ನಾಟಕ ಅರಣ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಗಡಿ ಭಾಗದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಾಹನ ಸಂಚಾರದ ಮೇಲೆ ನಿಗಾ ವಹಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 27, 2026 09:44 AM
Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More