ಮೂಡಿಗೆರೆಯ ಹಲವು ಗ್ರಾಮಗಳಲ್ಲಿ ಮುಂದುವರೆದ ಕಾಡಾನೆಗಳ ಉಪಟಳ; ವಿಡಿಯೋ ಇಲ್ಲಿದೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Aug 05, 2023 | 9:27 AM

ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ಉಪಟಳ ಮುಂದುವರೆದಿದ್ದು, ತಾಲೂಕಿನ ಬಡವನದಿಣ್ಣೆ ಗ್ರಾಮದಲ್ಲಿ ಬೀಡು ಬಿಟ್ಟಿವೆ. ಕಾಡಾನೆ ದಾಂಧಲೆಗೆ ಲಕ್ಷಾಂತರ ಮೌಲ್ಯದ ಕಾಫಿ ಮೆಣಸು, ಅಡಿಕೆ, ಬಾಳೆ ನಾಶವಾಗಿದೆ.

ಚಿಕ್ಕಮಗಳೂರು, ಆ.5: ಮೂಡಿಗೆರೆ(Mudigere) ತಾಲೂಕಿನಲ್ಲಿ ಕಾಡಾನೆ ಉಪಟಳ ಮುಂದುವರೆದಿದ್ದು, ತಾಲೂಕಿನ ಬಡವನದಿಣ್ಣೆ ಗ್ರಾಮದಲ್ಲಿ ಬೀಡು ಬಿಟ್ಟಿವೆ. ಕಾಡಾನೆ ದಾಂಧಲೆಗೆ ಲಕ್ಷಾಂತರ ಮೌಲ್ಯದ ಕಾಫಿ ಮೆಣಸು, ಅಡಿಕೆ, ಬಾಳೆ ನಾಶವಾಗಿದ್ದು, ಬಡವನದಿಣ್ಣೆ, ಮೇಗೂರು,ಮಲೆಮನೆ, ಸುಂದರಬೈಲ್ ಬಾಳೂರು ಗ್ರಾಮಗಳಲ್ಲಿ ಆನೆಗಳು ಸಂಚಾರ ಮಾಡುತ್ತಿದೆ. ಇನ್ನು ನಿರಂತರವಾಗಿ ಕಾಫಿ ತೋಟದಲ್ಲಿ ಬೆಳೆ ನಾಶ ಮಾಡುತ್ತಿರುವ ಕಾಡಾನೆಗಳಿಂದ ಕಾಫಿ ತೋಟಕ್ಕೆ ಕೆಲಸಕ್ಕೆ ಬರಲು ಕಾರ್ಮಿಕರ ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ಸ್ಥಳಾಂತರ ಮಾಡುವಂತೆ ಸರ್ಕಾರಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 05, 2023 09:27 AM
Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More