ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ

ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
| Updated By: ಆಯೇಷಾ ಬಾನು

Updated on: Jul 06, 2024 | 10:38 AM

ಮೈಸೂರಿನಿಂದ‌ ತರಕಾರಿ ತುಂಬಿದ ಲಾರಿಯೊಂದು ಆನೆಚೌಕೂರು, ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿತ್ತು. ರಾತ್ರಿ 10.45ರ ಸುಮಾರಿಗೆ ಆನೆ ಚೌಕೂರು ಬಳಿ ಲಾರಿಗೆ ಅಡ್ಡಲಾಗಿ ಬಂದ ಒಂಟಿ ಸಲಗ ವಾಹನದ ಹಿಂಭಾಗಕ್ಕೆ ತೆರಳಿ ಟಾರ್ಪಲ್ ಎಳೆದು ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ.

ಪೊನ್ನಂಪೇಟೆ, ಜುಲೈ.06: ಕೊಡಗು ಮೈಸೂರು ಗಡಿ ಆನೆ ಚೌಕೂರು ಬಳಿ ಕಾಡಾನೆಯೊಂದು ಕಳೆದ ರಾತ್ರಿ ಲಾರಿಯೊಂದನ್ನು ತಡೆದು ಮನಸೋ ಇಚ್ಚೆ ತರಕಾರಿ ಭಕ್ಷಿಸಿದೆ. ಮೈಸೂರಿನಿಂದ‌ ತರಕಾರಿ ತುಂಬಿದ ಲಾರಿಯೊಂದು ಆನೆಚೌಕೂರು, ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿತ್ತು. ರಾತ್ರಿ 10.45ರ ಸುಮಾರಿಗೆ ಆನೆ ಚೌಕೂರು ಬಳಿ ಲಾರಿಗೆ ಅಡ್ಡಲಾಗಿ ಬಂದ ಒಂಟಿ ಸಲಗ ವಾಹನದ ಹಿಂಭಾಗಕ್ಕೆ ತೆರಳಿ ಟಾರ್ಪಲ್ ಎಳೆದು ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ. ಬಳಿಕ ಸುಮಾರು ಅರ್ಧಗಂಟೆಗಳ ಕಾಲ ತಿಂದು ತೇಗಿ ತೆರಳಿದೆ.

ಅರಣ್ಯಾಧಿಕಾರಿಗಳ ವಸತಿ ಗೃಹ ಅಲ್ಲೇ ಸಮೀಪದಲ್ಲೇ ಇದ್ದರೂ ಯಾರೂ ಸಹಾಯಕ್ಕೆ ಬರಲಿಲ್ಲ ಎನ್ನಲಾಗಿದೆ. ಸಧ್ಯ ಲಾರಿ ಚಾಲಕ ತರಕಾರಿ ಕಳೆದುಕೊಂಡು ಪರಿತಪಿಸಿದ್ದಾನೆ. ಬಳಿಕ ಉಳಿದ ತರಕಾರಿ ತೆಗೆದುಕೊಂಡು ಕೇರಳ ತೆರಳಿದ್ದಾನೆ ಎನ್ನಲಾಗಿದೆ. ತರಕಾರಿ ಲಾರಿಗೆ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ