ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ

ಮೈಸೂರಿನಿಂದ‌ ತರಕಾರಿ ತುಂಬಿದ ಲಾರಿಯೊಂದು ಆನೆಚೌಕೂರು, ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿತ್ತು. ರಾತ್ರಿ 10.45ರ ಸುಮಾರಿಗೆ ಆನೆ ಚೌಕೂರು ಬಳಿ ಲಾರಿಗೆ ಅಡ್ಡಲಾಗಿ ಬಂದ ಒಂಟಿ ಸಲಗ ವಾಹನದ ಹಿಂಭಾಗಕ್ಕೆ ತೆರಳಿ ಟಾರ್ಪಲ್ ಎಳೆದು ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ.

ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
| Updated By: ಆಯೇಷಾ ಬಾನು

Updated on: Jul 06, 2024 | 10:38 AM

ಪೊನ್ನಂಪೇಟೆ, ಜುಲೈ.06: ಕೊಡಗು ಮೈಸೂರು ಗಡಿ ಆನೆ ಚೌಕೂರು ಬಳಿ ಕಾಡಾನೆಯೊಂದು ಕಳೆದ ರಾತ್ರಿ ಲಾರಿಯೊಂದನ್ನು ತಡೆದು ಮನಸೋ ಇಚ್ಚೆ ತರಕಾರಿ ಭಕ್ಷಿಸಿದೆ. ಮೈಸೂರಿನಿಂದ‌ ತರಕಾರಿ ತುಂಬಿದ ಲಾರಿಯೊಂದು ಆನೆಚೌಕೂರು, ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿತ್ತು. ರಾತ್ರಿ 10.45ರ ಸುಮಾರಿಗೆ ಆನೆ ಚೌಕೂರು ಬಳಿ ಲಾರಿಗೆ ಅಡ್ಡಲಾಗಿ ಬಂದ ಒಂಟಿ ಸಲಗ ವಾಹನದ ಹಿಂಭಾಗಕ್ಕೆ ತೆರಳಿ ಟಾರ್ಪಲ್ ಎಳೆದು ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ. ಬಳಿಕ ಸುಮಾರು ಅರ್ಧಗಂಟೆಗಳ ಕಾಲ ತಿಂದು ತೇಗಿ ತೆರಳಿದೆ.

ಅರಣ್ಯಾಧಿಕಾರಿಗಳ ವಸತಿ ಗೃಹ ಅಲ್ಲೇ ಸಮೀಪದಲ್ಲೇ ಇದ್ದರೂ ಯಾರೂ ಸಹಾಯಕ್ಕೆ ಬರಲಿಲ್ಲ ಎನ್ನಲಾಗಿದೆ. ಸಧ್ಯ ಲಾರಿ ಚಾಲಕ ತರಕಾರಿ ಕಳೆದುಕೊಂಡು ಪರಿತಪಿಸಿದ್ದಾನೆ. ಬಳಿಕ ಉಳಿದ ತರಕಾರಿ ತೆಗೆದುಕೊಂಡು ಕೇರಳ ತೆರಳಿದ್ದಾನೆ ಎನ್ನಲಾಗಿದೆ. ತರಕಾರಿ ಲಾರಿಗೆ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ