ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ

| Updated By: ಆಯೇಷಾ ಬಾನು

Updated on: Jul 06, 2024 | 10:38 AM

ಮೈಸೂರಿನಿಂದ‌ ತರಕಾರಿ ತುಂಬಿದ ಲಾರಿಯೊಂದು ಆನೆಚೌಕೂರು, ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿತ್ತು. ರಾತ್ರಿ 10.45ರ ಸುಮಾರಿಗೆ ಆನೆ ಚೌಕೂರು ಬಳಿ ಲಾರಿಗೆ ಅಡ್ಡಲಾಗಿ ಬಂದ ಒಂಟಿ ಸಲಗ ವಾಹನದ ಹಿಂಭಾಗಕ್ಕೆ ತೆರಳಿ ಟಾರ್ಪಲ್ ಎಳೆದು ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ.

ಪೊನ್ನಂಪೇಟೆ, ಜುಲೈ.06: ಕೊಡಗು ಮೈಸೂರು ಗಡಿ ಆನೆ ಚೌಕೂರು ಬಳಿ ಕಾಡಾನೆಯೊಂದು ಕಳೆದ ರಾತ್ರಿ ಲಾರಿಯೊಂದನ್ನು ತಡೆದು ಮನಸೋ ಇಚ್ಚೆ ತರಕಾರಿ ಭಕ್ಷಿಸಿದೆ. ಮೈಸೂರಿನಿಂದ‌ ತರಕಾರಿ ತುಂಬಿದ ಲಾರಿಯೊಂದು ಆನೆಚೌಕೂರು, ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿತ್ತು. ರಾತ್ರಿ 10.45ರ ಸುಮಾರಿಗೆ ಆನೆ ಚೌಕೂರು ಬಳಿ ಲಾರಿಗೆ ಅಡ್ಡಲಾಗಿ ಬಂದ ಒಂಟಿ ಸಲಗ ವಾಹನದ ಹಿಂಭಾಗಕ್ಕೆ ತೆರಳಿ ಟಾರ್ಪಲ್ ಎಳೆದು ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ. ಬಳಿಕ ಸುಮಾರು ಅರ್ಧಗಂಟೆಗಳ ಕಾಲ ತಿಂದು ತೇಗಿ ತೆರಳಿದೆ.

ಅರಣ್ಯಾಧಿಕಾರಿಗಳ ವಸತಿ ಗೃಹ ಅಲ್ಲೇ ಸಮೀಪದಲ್ಲೇ ಇದ್ದರೂ ಯಾರೂ ಸಹಾಯಕ್ಕೆ ಬರಲಿಲ್ಲ ಎನ್ನಲಾಗಿದೆ. ಸಧ್ಯ ಲಾರಿ ಚಾಲಕ ತರಕಾರಿ ಕಳೆದುಕೊಂಡು ಪರಿತಪಿಸಿದ್ದಾನೆ. ಬಳಿಕ ಉಳಿದ ತರಕಾರಿ ತೆಗೆದುಕೊಂಡು ಕೇರಳ ತೆರಳಿದ್ದಾನೆ ಎನ್ನಲಾಗಿದೆ. ತರಕಾರಿ ಲಾರಿಗೆ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us on