AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಗಾಂಧಿ 'ಗತವೈಭವ’ ಆಳ್ವಿಕೆಯ ಭಾಗವಾಗಿದ್ದ ತುರ್ತು ಪರಿಸ್ಥಿತಿಯನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ: ನಳಿನ್ ಕುಮಾರ್ ಕಟೀಲ್

ಇಂದಿರಾ ಗಾಂಧಿ ‘ಗತವೈಭವ’ ಆಳ್ವಿಕೆಯ ಭಾಗವಾಗಿದ್ದ ತುರ್ತು ಪರಿಸ್ಥಿತಿಯನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ: ನಳಿನ್ ಕುಮಾರ್ ಕಟೀಲ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 31, 2023 | 1:38 PM

Share

ಭ್ರಷ್ಟಾಚಾರದ ವಿರುದ್ಧ ಮಾತಾಡಿದರೆ ಕೇಸ್, ಸೋಷಿಯಲ್ ಮೀಡಿಯಾದವರ ಮೇಲೆ ಪ್ರಕರಣಗಳು, ದ್ವೇಷದ ರಾಜಕಾರಣ, ರಾಜ್ಯಪಾಲರಲ್ಲಿಗೆ ದೂರು ಒಯ್ದವರನ್ನು ಹಿಡಿದು ಜೈಲಿಗೆ ಹಾಕುವುದು ಮೊದಲಾದ ಕೃತ್ಯಗಳು ನಡೆಯುತ್ತಿರುವುದರಿಂದ ತುರ್ತು ಪರಿಸ್ಥಿತಿ ರಾಜ್ಯದಲ್ಲಿ ಜಾರಿಯಾಗಿದೆ ಅಂತಲೇ ಅರ್ಥ ಎಂದ ಕಟೀಲ್ ಹೇಳಿದರು.

ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಎಂದಿನಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ (state government) ವಿರುದ್ಧ ಪ್ರಹಾರ ನಡೆಸಿದರು. ನಿನ್ನೆ ಗೃಹಲಕ್ಷ್ಮಿ ಯೋಜನೆ (Gruha Lakshmi scheme ) ಜಾರಿಗೊಳಿಸಿದ ಬಳಿಕ ಇಂದಿರಾ ಗಾಂಧಿ (Indira Gandhi) ಆಳ್ವಿಕೆಯ ಗತವೈಭವ ವಾಪಸ್ಸು ಬಂದಿದೆ ಅಂತ ಕಾಂಗ್ರೆಸ್ ನಾಯಕರು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಕಟೀಲ್, ಆ ಗತವೈಭವದಲ್ಲಿ ತುರ್ತು ಪರಿಸ್ಥಿತಿಯೂ ಸೇರಿತ್ತು ಅನ್ನೋದನ್ನು ಅವರು ಮರೆಯಬಾರದು ಎಂದರು. ರಾಜ್ಯದಲ್ಲಿ ಈಗಾಗಲೇ ಎಮರ್ಜೆನ್ಸಿಯಂಥ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ ಅವರು, ಭ್ರಷ್ಟಾಚಾರದ ವಿರುದ್ಧ ಮಾತಾಡಿದರೆ ಕೇಸ್, ಸೋಷಿಯಲ್ ಮೀಡಿಯಾದವರ ಮೇಲೆ ಪ್ರಕರಣಗಳು, ದ್ವೇಷದ ರಾಜಕಾರಣ, ರಾಜ್ಯಪಾಲರಲ್ಲಿಗೆ ದೂರು ಒಯ್ದವರನ್ನು ಹಿಡಿದು ಜೈಲಿಗೆ ಹಾಕುವುದು ಮೊದಲಾದ ಕೃತ್ಯಗಳು ನಡೆಯುತ್ತಿರುವುದರಿಂದ ತುರ್ತು ಪರಿಸ್ಥಿತಿ ರಾಜ್ಯದಲ್ಲಿ ಜಾರಿಯಾಗಿದೆ ಅಂತಲೇ ಅರ್ಥ ಎಂದರು. ಕಾವೇರಿ ನದಿ ನೀರನ್ನು ರಾತ್ರಿ ಸಮಯ ತಮಿಳುನಾಡುಗೆ ಹರಿಬಿಟ್ಟು ಸರ್ಕಾರ ರಾಜ್ಯದ ರೈತರಿಗೆ ಅನ್ಯಾಯವೆಸಗುತ್ತಿದೆ; ಬಿಜೆಪಿ, ಸರ್ಕಾರದ ಕ್ರಮ ಪ್ರಶ್ನಿಸಿ ಪ್ರತಿಭಟನೆ ನಡೆಸಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.