AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿ 26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ

ನಾಪತ್ತೆಯಾಗಿ 26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jun 11, 2026 | 11:54 AM

Share

26 ವರ್ಷಗಳ ಹಿಂದೆ ಸರ್ಕಸ್ ತಂಡದೊಂದಿಗೆ ಹೋಗಿ ನಾಪತ್ತೆಯಾಗಿದ್ದ ಮಗ 26 ವರ್ಷಗಳ ಬಳಿಕ ಮನೆಗೆ ಮರಳಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಗ ಸತೀಶ್ ಅಲಿಯಾಸ್ ಸಲೀಂ ಆಗಮನದಿಂದ ತಾಯಿ ಅಪಾರ ಸಂತಸಗೊಂಡಿದ್ದು, ಧರ್ಮಸ್ಥಳ, ಕಟೀಲು ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿನ ಹರಕೆಗಳನ್ನು ತೀರಿಸಲು ಸಿದ್ಧರಾಗಿದ್ದಾರೆ. ತನ್ನ ಆಸೆ ಕೊನೆಗೂ ಈಡೇರಿದ್ದಕ್ಕೆ ತಾಯಿ ಭಾವುಕರಾಗಿದ್ದಾರೆ.

ಮಂಗಳೂರು, ಜೂನ್​​ 11: 26 ವರ್ಷಗಳ ಹಿಂದೆ ಬಾಲಕನಾಗಿದ್ದ ವೇಳೆ ಮನೆಬಿಟ್ಟು ಹೋಗಿದ್ದವ ಪುನಃ ಮನೆಗೆ ಹಿಂದಿರುಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದದಲ್ಲಿ ನಡೆದಿದೆ. ಸತೀಶ್ ಎಂಬಾತ ಈಗ ಸಲೀಂ ಆಗಿ ಹಿಂದಿರುಗಿದ್ದು, ಸುದೀರ್ಘ ವರ್ಷಗಳ ಬಳಿಕ ಮಗನನ್ನು ಕಂಡು ತಾಯಿ ಭಾವುಕರಾಗಿದ್ದಾರೆ. 2000ನೇ ಇಸವಿಯಲ್ಲಿ ಧರ್ಮಸ್ಥಳಕ್ಕೆ ಬಂದಿದ್ದ ಸರ್ಕಸ್ ತಂಡದೊಂದಿಗೆ ಓಡಿಹೋಗಿದ್ದ ಇವರು, ಇಷ್ಟು ವರ್ಷಗಳ ಕಾಲ ಮಹಾರಾಷ್ಟ್ರದಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಮಗನನ್ನು ನೋಡುವ ಮುನ್ನವೇ ಸಾಯಬಾರದು ಎಂದು ಬಯಸಿದ್ದ ತಾಯಿಗೆ, ಮಗನ ಆಗಮನದಿಂದ ಅತೀವ ಆನಂದವಾಗಿದೆ. ಮಗನಿಗಾಗಿ ಧರ್ಮಸ್ಥಳ, ಕಟೀಲು ಸೇರಿದಂತೆ ಹಲವು ದೇವಸ್ಥಾನಗಳಿಗೆ ಹರಕೆ ಹೊತ್ತಿದ್ದ ತಾಯಿ, ಈಗ ಮಗ ಮರಳಿರುವ ಹಿನ್ನೆಲೆಯಲ್ಲಿ ಹರಕೆ ತೀರಿಸಲು ಸಿದ್ಧವಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More