ಚಿಕ್ಕಬಳ್ಳಾಪುರ ಬಳಿ ರೆಸಾರ್ಟ್​ನಲ್ಲಿ ಕೆಲಸ ಮಾಡುತ್ತಿದ್ದವರ ನಡುವಿನ ಜಗಳ ಒಬ್ಬನ ಕೊಲೆಯಲ್ಲಿ ಪರ್ಯಾವಸನ

ಅರುಣ್​ ಕುಮಾರ್​ ಬೆಳ್ಳಿ

Updated on: Jun 09, 2025 | 11:14 AM

ಫ್ಯಾಮಿಲಿಗಳ ವಿಷಯದಲ್ಲಿ ರೆಸಾರ್ಟ್ ಉದ್ಯೋಗಿಗಳ ನಡುವೆ ಜಗಳ ಆರಂಭವಾಗಿದೆ ಮತ್ತು ಮೋಹನ್​ ಎನ್ನುವವನನ್ನು ಉಳಿದ ನಾಲ್ವರು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ ಎಂದು ವರದರಾಜ್ ಹೇಳುತ್ತಾರೆ. ರೆಸಾರ್ಟ್​ ಹೊರವಲಯದಲ್ಲಿ ಮೋಹನ್​ನನ್ನು ಕೊಂದು ದೇಹವನ್ನು ತಂದು ಸ್ಟೋರ್ ರೂಮಲ್ಲಿ ಹಾಕಿದ್ದರಂತೆ. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು, ಜೂನ್ 9: ವೀಕೆಂಡ್ ಬಂತು ಅಂತಾದರೆ ಅಪರಾಧಗಳು ನಡೆಯೋದು ಖಚಿತ ಅಂದುಕೊಳ್ಳಬೇಕು. ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅಗಲಿಗುರ್ಕಿಯಲ್ಲಿರುವ ರೆಸಾರ್ಟ್​ನಲ್ಲಿ (Resort near Chikkaballapura) ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಐದು ಜನರ ನಡುವೆ ಯಾವುದೋ ಕಾರಣಕ್ಕೆ ಜಗಳ ಶುರುವಾಗಿ, ಒಬ್ಬನ ಕೊಲೆಯಲ್ಲಿ ಪರ್ಯಾವಸನಗೊಂಡಿದೆ. ಕೊಲೆಯಾದ ವ್ಯಕ್ತಿಯನ್ನು ಮೋಹನ್ (34) ಎಂದು ಗುರುತಿಸಲಾಗಿದೆ. ರೆಸಾರ್ಟ್ ಮಾಲೀಕ ವರದರಾಜ್ ಹೇಳುವ ಹಾಗೆ, ಕೇವಲ ಒಂದೂವರೆ ತಿಂಗಳ ಹಿಂದೆ ಕೆಲಸಕ್ಕೆ ಸೇರಿಕೊಂಡಿದ್ದ ಅವರೆಲ್ಲ ನಿನ್ನೆ ರಾತ್ರಿ ಮದ್ಯ ಸೇವಿಸಿದ್ದರಂತೆ. ಐವರಲ್ಲಿ ಇಬ್ಬರು ರೆಸಾರ್ಟ್​​ನ ಸರ್ವಿಸ್ ವಿಭಾಗಲ್ಲಿ ಕೆಲಸ ಮಾಡುತ್ತಿದ್ದರೆ ಉಳಿದ ಮೂವರು ಹೌಸ್​ ಕೀಪಿಂಗ್​​ನಲ್ಲಿದ್ದರು.

ಇದನ್ನೂ ಓದಿ:   ಸುಶಾಂತ್ ಸಿಂಗ್ ಮಾಜಿ ಗೆಳತಿಯ ಹೊಸ ಉದ್ಯಮ, ‘ಕೊಲೆ‘ ಆರೋಪವೇ ಸ್ಪೂರ್ತಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.