ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ, ಮುಂಬೈಯಲ್ಲಿ ಕುಂಭದ್ರೋಣ

ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ, ಮುಂಬೈಯಲ್ಲಿ ಕುಂಭದ್ರೋಣ
|

Updated on: Jul 08, 2024 | 1:50 PM

ಮಹಾರಾಷ್ಟ್ರದ ಬಹುತೇಕ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ ಕೊಂಕಣ ಪ್ರದೇಶದಲ್ಲಂತೂ ಮಳೆಯ ಆರ್ಭಟ ಹೆದರಿಕೆ ಹುಟ್ಟಿಸುವಂತಿದೆ. ಮಹಾರಾಷ್ಟ್ರ ಮತ್ತು ದೇಶದ ವಾಣಿಜ್ಯ ರಾಜಧಾನಿ ಮುಂಬೈ ನಗರದಲ್ಲೂ ಭಾರಿ ಮಳೆಯಿಂದ ಹಾಹಾಕಾರ ಸೃಷ್ಟಿಯಾಗಿದೆ. ಲೋಕಲ್ ಮತ್ತು ಇತರ ರೇಲ್ವೇ ಟ್ರ್ಯಾಕ್ ಗಳು ಜಲಾವೃತಗೊಂಡಿರುವುದರಿಂದ ರೈಲು ಸಂಚಾರ ಪ್ರಭಾವಕ್ಕೊಳಗಾಗಿದೆ.

ರತ್ನಗಿರಿ: ಮಹಾರಾಷ್ಟ್ರದ ರತ್ನಗಿರಿ ಒಂದು ಜಿಲ್ಲಾ ಬಂದರು ಕೇಂದ್ರ ಮತ್ತು ಅಲ್ಫೋನ್ಸೋ ತಳಿ ಮಾವಿನ ಹಣ್ಣುಗಳಿಗೆ ವಿಶ್ವಪ್ರಸಿದ್ಧ. ನಗರದ ಇತಿಹಾಸವನ್ನು ಕೆದಕುವುದಾದರೆ ಇದು ಲೋಕಮಾನ್ಯ ತಿಲಕರವರ ಜನ್ಮಸ್ಥಳ ಹಾಗೂ ಸ್ವಾತಂತ್ರ್ಯ ಸೇನಾನಿ ವೀರ್ ಸಾವರ್ಕರ್ ಅವರ ಕರ್ಮಭೂಮಿ. ಓಕೆ, ಸುಮಾರು ಮೂರೂವರೆ ಲಕ್ಷ ಜನಸಂಖ್ಯೆಯ ರತ್ನಗಿರಿ ನಗರವು ಈಗ ಬೇರೆ ಕಾರಣಗಳಿಗೆ ಸುದ್ದಿಯಲ್ಲಿದೆ. ಮೊಬೈಲ್ ಫೋನಲ್ಲಿ ಸೆರೆ ಹಿಡಿದಿರುವ ಈ ವಿಡಿಯೋವನ್ನು ನೋಡಿ, ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗೀ ಪೂರ್ತಿ ನಗರವೇ ಜಲಾಲಾವೃತಗೊಂಡು ಒಂದು ದ್ವೀಪದಂತೆ ಗೋಚರಿಸುತ್ತಿದೆ. ಕೆಲವು ಭಾಗಗಳಲ್ಲಿ ಮನೆಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಶೆಡ್ ಮತ್ತು ಗ್ಯಾರೇಜುಗಳ ಕೇವಲ ಛಾವಣಿ ಮಾತ್ರ ಕಾಣಿಸುತ್ತಿದೆ. ಅಂದಹಾಗೆ ಮಳೆ ಸುರಿಯುವುದೇನೂ ನಿಂತಿಲ್ಲ. ನಗರದ ನಿವಾಸಿಗಳ ಬವಣೆಯನ್ನು ಯೋಚಿಸಿದರೆ ಗಾಬರಿಯಾಗುತ್ತದೆ. ಯಾಕೆಂದರೆ ಅವರು ಯಾವುದಕ್ಕೂ ಹೊರಹೋಗಲಾರರು. ಅಕ್ಕಿ, ದಿನಸಿ, ಚಹಾಪುಡಿ-ಹಾಲು ಮೊದಲಾದ ಅಗತ್ಯ ವಸ್ತುಗಳನ್ನು ತಂದುಕೊಳ್ಳುವುದು ಸಾಧ್ಯವಿಲ್ಲ. ಜಿಲ್ಲಾಡಳಿತವೇ ಬೋಟುಗಳ ಮೂಲಕ ಅಗತ್ಯ ವಸ್ತುಗಳನ್ನು ಮನೆ ಮನೆ ತಲುಪಿಸಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಮುಂಬೈನಲ್ಲಿ ಭಾರೀ ಮಳೆ: ಮಹಾರಾಷ್ಟ್ರದ ರಾಯಘಡ, ರತ್ನಗಿರಿ, ಸತಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

 

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ