AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ರಾಜ್ಯದೆಲ್ಲೆಡೆ ತಾಂಡವಾಡುತ್ತಿದೆ, ಮುಖ್ಯಮಂತ್ರಿ ಬೊಮ್ಮಾಯಿ ವಸೂಲಿ ಕೆಲಸ ಶುರುವಿಟ್ಟುಕೊಂಡಿದ್ದಾರೆ: ಡಿಕೆ ಶಿವಕುಮಾರ್

ಭ್ರಷ್ಟಾಚಾರ ರಾಜ್ಯದೆಲ್ಲೆಡೆ ತಾಂಡವಾಡುತ್ತಿದೆ, ಮುಖ್ಯಮಂತ್ರಿ ಬೊಮ್ಮಾಯಿ ವಸೂಲಿ ಕೆಲಸ ಶುರುವಿಟ್ಟುಕೊಂಡಿದ್ದಾರೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 06, 2023 | 12:18 PM

Share

ಚುನಾವಣೆ ಹತ್ತಿರವಾಗುತ್ತಿರುವುದರಿಂದ ಮುಖ್ಯಮಂತ್ರಿ ಅಲ್ಪಾವಧಿಯ ಟೆಂಡರ್ ಮತ್ತು ಕಾರ್ಯಾದೇಶಗಳನ್ನು ಪಾಸ್ ಮಾಡುವ ಮೂಲಕ ವಸೂಲಿ ಕೆಲಸ ಶುರುಮಾಡಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದರು.

ಬೆಳಗಾವಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj S Bommai) ಅವರ ಸರ್ಕಾರದಲ್ಲಿ ರಾಜ್ಯದೆಲ್ಲೆಡೆ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಹೇಳಿದರು. ಚುನಾವಣೆ ಹತ್ತಿರವಾಗುತ್ತಿರುವುದರಿಂದ ಮುಖ್ಯಮಂತ್ರಿ ಅಲ್ಪಾವಧಿಯ ಟೆಂಡರ್ (short term tenders) ಮತ್ತು ಕಾರ್ಯಾದೇಶಗಳನ್ನು ಪಾಸ್ ಮಾಡುವ ಮೂಲಕ ವಸೂಲಿ ಕೆಲಸ ಶುರುಮಾಡಿದ್ದಾರೆ. ತಾಲ್ಲೂಕು ಮತ್ತು ಎಲ್ಲಾಮಟ್ಟದ ಅಧಿಕಾರಿಗಳ ಒತ್ತಡ ಹೇರಲಾಗುತ್ತಿದೆ, ಅಧಿಕಾರಿಗಳು ತಮ್ಮಲ್ಲಿಗೆ ಬಂದು ದೂರುಗಳನ್ನು ಹೇಳಿಕೊಳ್ಳುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 06, 2023 12:17 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.