‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆ ಬಂದ್ ಆಗುತ್ತಾ? ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ

Updated on: Oct 07, 2025 | 5:24 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಸಂಕಷ್ಟ ಎದುರಾಗಿದೆ. ‘ವೇಲ್ಸ್​ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಡೆಟ್’ ಕಂಪನಿಗೆ ಜಾಲಿವುಡ್ ಸೇರಿದೆ. ಆ ಕಂಪನಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್​ ನೀಡಲಾಗಿದೆ. ಈ ಬಗ್ಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋ ಬಂದ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ. ಈ ಬಗ್ಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಹೇಳಿಕೆ ನೀಡಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. ‘ರಾಮನಗರದ ಅಧಿಕಾರಿಗಳು ಹಿಂದೆಯೇ ನೋಟಿಸ್​ ಕೊಟ್ಟಿದ್ದಾರೆ. 2024ರ ಮಾರ್ಚ್​ನಲ್ಲೇ ನೋಟಿಸ್​ ನೀಡಲಾಗಿತ್ತು. ಪರಿಶೀಲನೆ ವೇಳೆ ಪರವಾನಗಿ ಪಡೆದಿಲ್ಲ ಎಂಬ ಮಾಹಿತಿ ಬಂದಿದೆ. ಸ್ಟುಡಿಯೋದವರು ಪರವಾನಗಿ ಪಡೆದಿಲ್ಲ, ಅರ್ಜಿಯನ್ನೂ ಹಾಕಿಲ್ಲ. ನೋಟಿಸ್​ ಕೊಟ್ಟರೂ ಅಮ್ಯೂಸ್​ಮೆಂಟ್​ ಪಾರ್ಕ್ ನಡೆಸುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಕೋರ್ಟ್ ಮೊರೆ ಹೋಗಲು ಎಲ್ಲರಿಗೂ ಅವಕಾಶ ಇದೆ. ಕಾನೂನು ರೀತಿ ಏನು ಕ್ರಮ ವಹಿಸಬೇಕೋ ಅದನ್ನು ವಹಿಸಲಿ’ ಎಂದಿದ್ದಾರೆ ಸಚಿವ ಈಶ್ವರ ಖಂಡ್ರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More