ಯಡಿಯೂರಪ್ಪ ಹೃದಯ ಬಗೆದ್ರೆ ಶೋಭಕ್ಕ ಇರ್ತಾರೆ ಎಂದ ಈಶ್ವರಪ್ಪ ಬೆಂಬಲಿಗರು

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 15, 2024 | 10:02 PM

ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಈಗಾಗಲೇ ಘೋಷಿಸಿದ್ದು, ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೈತಪ್ಪಿದ ಹಿನ್ನಲೆ ತೀವ್ರ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪ(KS Eshwarappa), ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.

ಶಿವಮೊಗ್ಗ, ಮಾ.15: ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಈಗಾಗಲೇ ಘೋಷಿಸಿದ್ದು, ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೈತಪ್ಪಿದ ಹಿನ್ನಲೆ ತೀವ್ರ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪ(KS Eshwarappa), ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಇಂದು(ಮಾ,15) ಶಿವಮೊಗ್ಗದ (Shivamogga) ಬಂಜಾರ ಕನ್ವೆನ್ಷನ್​ ಹಾಲ್​ನಲ್ಲಿ ಮಾತನಾಡಿದ ಅವರು,  ‘ಸ್ವತಂತ್ರವಾಗಿ ಸ್ಪರ್ಧಿಸಿ ನಾನು ಮೋದಿ, ಬಿಜೆಪಿ ವಿರುದ್ಧ ಹೋಗುತ್ತಿಲ್ಲ. ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿರುವುದನ್ನು ಬಿಡಿಸಲು ಸ್ಪರ್ಧೆ ಮಾಡುತ್ತೇನೆ. ನೊಂದ ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ಸ್ಪತಂತ್ರವಾಗಿ ಸ್ಪರ್ಧಿಸುವೆ. ನನ್ನಿಂದಲೇ ಎನ್ನುವವರ ವಿರುದ್ಧ ಚುನಾವಣಾ ಕಣಕ್ಕೆ ಇಳಿಯುತ್ತಿದ್ದೇನೆ ಎಂದರು. ಇದೇ ವೇಳೆ ನನ್ನ ಹೃದಯಲ್ಲಿ ಮೋದಿ ಇದ್ದಾರೆ ಎನ್ನುವಾಗ ಯಡಿಯೂರಪ್ಪನವರ ಹೃದಯ ಬಗೆದರೆ ಶೋಬಕ್ಕ ಹಾಗೂ ಮಕ್ಕಳು ಇದ್ದಾರೆ ಎಂದು ಈಶ್ವರಪ್ಪನವರ ಬೆಂಬಲಿಗರು ಹೇಳಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on