ಅಂಬಿಗರ ಚೌಡಯ್ಯನವರ ವಚನಗಳು ಇವತ್ತಿಗೂ ಪ್ರಸ್ತುತ ಮತ್ತು ಸರ್ವಕಾಲಿಕ ಸತ್ಯ: ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ

Updated on: Jan 15, 2024 | 4:57 PM

ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದ ಕೇಂದ್ರ ಸಚಿವ ಜೋಶಿ , ಮುಖ್ಯಮಂತ್ರಿ ಸಿದ್ದರಾಮಯ್ಯ ತನಗೆ ಹೇಳಿದ್ದನ್ನು ಭಾಷಣದಲ್ಲಿ ಉಲ್ಲೇಖಿಸಿದರು. ನಮ್ಮಲ್ಲಿ ವ್ಯಕ್ತಿಗತವಾಗಿ ವೈಚಾರಿಕ ಭಿನ್ನಾಭಿಪ್ರಾಯಗಳಿದ್ದರೂ ವೈಯಕ್ತಿಕ ದ್ವೇಷ ಇರಬಾರದು ಅಂತ ಸಿದ್ದರಾಮಯ್ಯ ಈಗಷ್ಟೇ ತನಗೆ ಹೇಳಿದರು ಎಂದು ಜೋಶಿ ಸಭೆಗೆ ತಿಳಿಸಿದರು.

ಹಾವೇರಿ: ಆದಿಕಾಲದಿಂದಲೂ ನಮ್ಮ ದೇಶದಲ್ಲಿ ವ್ಯಕ್ತಿಯೊಬ್ಬನನ್ನು ಅವನ ಜಾತಿಯ ಆಧಾರದಲ್ಲಿ ಗುರುತಿಸುವ ಸಂಪ್ರದಾಯ ಯಾವತ್ತೂ ಇರಲಿಲ್ಲ, ಮಹಾಭಾರತ ಮತ್ತು ರಾಮಾಯಣದಲ್ಲೂ ಈ ಅಂಶವನ್ನು ಸ್ಪಷ್ಟವಾಗಿ ಗುರುತಿಸಬಹುದು, ರಾಮಾಯಣದಲ್ಲಿ ರಾವಣನೇ (Ravan) ದೊಡ್ಡ ಖಳನಾಯನಾದರೂ ಅವನು ಉಚ್ಛ ಜಾತಿಗೆ ಸೇರಿದವನು, ರಾಮ (Ram) ಉಚ್ಛಜಾತಿಗೆ ಸೇರಿದವನಲ್ಲ, ಆದರೆ ನಮ್ಮ ನಾಡಿನಲ್ಲಿ ಪೂಜಿಸಲ್ಪಡೋದು ರಾಮನೇ ಹೊರತು ರಾವಣನಲ್ಲ, ಕೇವಲ ಕುಲೀನ ಜಾತಿಗೆ ಸೇರಿದವರನ್ನು ಆರಾಧಿಸಬೇಕೆಂಬ ಪರಿಪಾಠ ನಮ್ಮಲ್ಲಿಲ್ಲ ಎಂಬ ಅತ್ಯಂತ ಗಹನವಾದ ಅಂಶವನ್ನು ಅಂಬಿಗರ ಚೌಡಯ್ಯ ತಮ್ಮ ವಚನಗಳಲ್ಲಿ ಹೇಳಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು. ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ನರಸೀಪುರದಲ್ಲಿ ಆಯೋಜಿಸಿದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದ ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತನಗೆ ಹೇಳಿದ್ದನ್ನು ಭಾಷಣದಲ್ಲಿ ಉಲ್ಲೇಖಿಸಿದರು. ನಮ್ಮಲ್ಲಿ ವ್ಯಕ್ತಿಗತವಾಗಿ ವೈಚಾರಿಕ ಭಿನ್ನಾಭಿಪ್ರಾಯಗಳಿದ್ದರೂ ವೈಯಕ್ತಿಕ ದ್ವೇಷ ಇರಬಾರದು ಅಂತ ಸಿದ್ದರಾಮಯ್ಯ ಈಗಷ್ಟೇ ತನಗೆ ಹೇಳಿದರು ಎಂದು ಜೋಶಿ ಸಭೆಗೆ ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More