AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಶಾಸಕರನ್ನು ಮಂತ್ರಿ ಮಾಡೋದು ಸಾಧ್ಯವಿಲ್ಲ, ಆಕಾಂಕ್ಷಿಗಳು ಅರ್ಥಮಾಡಿಕೊಳ್ಳಬೇಕು: ಆರ್ ವಿ ದೇಶಪಾಂಡೆ

ಎಲ್ಲ ಶಾಸಕರನ್ನು ಮಂತ್ರಿ ಮಾಡೋದು ಸಾಧ್ಯವಿಲ್ಲ, ಆಕಾಂಕ್ಷಿಗಳು ಅರ್ಥಮಾಡಿಕೊಳ್ಳಬೇಕು: ಆರ್ ವಿ ದೇಶಪಾಂಡೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Jul 08, 2025 | 2:51 PM

Share

ಎಲ್ಲ ಸ್ವಾಮೀಜಿಗಳ ಬಗ್ಗೆ ತನಗೆ ಗೌರವ ಇದೆ ಎನ್ನುವ ದೇಶಪಾಂಡೆ, ಯಾವ್ಯಾವ ಸ್ವಾಮಿ ಏನು ಹೇಳಿದ್ದಾರೆ ಅಂತ ಒಂದು ಪಟ್ಟಿ ಮಾಡಿ ಎಂದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಗೆ ಹೆಚ್ಚಿನ ಅರ್ಥ ಕಲ್ಪಿಸದ ದೇಶಪಾಂಡೆ, ಸರ್ಕಾರದ ಕೆಲಸ ನಿಮಿತ್ತ ಅಲ್ಲಿಗೆ ಹೋಗಿರಬಹುದು ಎಂದರು.

ಬೆಂಗಳೂರು, ಜುಲೈ 8: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಶಾಸಕ ಆರ್ ವಿ ದೇಶಪಾಂಡೆ ಇಂದು ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾಗುವುದಾಗಿ ಹೇಳಿದರು. ಯಾಕೆ ಕರೆದಿದ್ದಾರೋ ಗೊತ್ತಿಲ್ಲ, ಕುಶಲೋಪರಿ ವಿಚಾರಿಸಲು ಕರೆದಿರಬಹುದು ಎಂದು ನಗುತ್ತಾ ಹೇಳಿದರು. ನಿಮ್ಮ ಪಕ್ಷದ ಶಾಸಕರಿಗೆ ಮಂತ್ರಿಯಾಗುವ ಹಂಬಲ ಹೆಚ್ಚುತ್ತಿದೆಯಲ್ಲ ಸಾರ್ ಅಂತ ಅವರನ್ನು ಕೇಳಿದಾಗ, ಹಂಬಲ, ಆಸೆ ಇಟ್ಟುಕೊಳ್ಳೋದು ತಪ್ಪೇನಲ್ಲ, ಅದರೆ ಎಷ್ಟು ಜನ ಶಾಸಕರನ್ನು ಮಂತ್ರಿ ಮಾಡಲು ಸಾಧ್ಯ? ವಿಧಾನ ಸಭೆಯ ಬಲ 224 ಮತ್ತು ಒಬ್ಬ ನಾಮ ನಿರ್ದೇಶಿತ ಶಾಸಕ ಸೇರಿದರೆ 225, ಸಂಪುಟದಲ್ಲಿ ಗರಿಷ್ಠ 35 ಸಚಿವರನ್ನು ನೇಮಕ ಮಾಡಬಹುದು ಅಷ್ಟೇ, ಶಾಸಕರು ಅದನ್ನು ಅರ್ಥಮಾಡಿಕೊಳ್ಳಬೇಕು ಎಂದು ದೇಶಪಾಂಡೆ ಹೇಳಿದರು.

ಇದನ್ನು ಓದಿ: ನಿಲ್ಲದ ಸತೀಶ್ ಸೈಲ್ ಮತ್ತು ಆರ್ ವಿ ದೇಶಪಾಂಡೆ ನಡುವಿನ ಜಟಾಪಟಿ, ಅಸಮಾಧಾನ ಹೊರಹಾಕಲು ಕೆಡಿಪಿ ಸಭೆಯೇ ವೇದಿಕೆ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 08, 2025 02:51 PM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.