ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ತುರುವನೂರು ಸಿದ್ಧಾರೂಢ ಅವರು ಜೈಲುವಾಸ ಅನುಭವಿಸಿದ್ದಾರೆ. ಸನ್ನಡತೆ ಆಧಾರದಲ್ಲಿ ಜೈಲಿಂದ ಅವರು ರಿಲೀಸ್ ಆಗಿದ್ದಾರೆ. ಅವರು ದರ್ಶನ್ ಅಭಿಮಾನಿ. ವಿಶೇಷ ಎಂದರೆ ಜೈಲಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲು ತುರುವನೂರು ಸಿದ್ಧಾರೂಢ ಅವರಿಗೆ ಅವಕಾಶ ಸಿಕ್ಕಿತ್ತು. ಅವರು ದರ್ಶನ್ನ ಭೇಟಿ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. ‘ನಾನು ಜೈಲು ಅಧಿಕಾರಿಗಳ ಬಳಿ ದರ್ಶನ್ ಭೇಟಿಗೆ ಅವಕಾಶ ನೀಡುವಂತೆ ಕೋರಿದೆ. ನನಗೆ ಅವರು ಅವಕಾಶ ಮಾಡಿಕೊಟ್ಟರು. ನಾನು ಅಭಿಮಾನಿ ಎಂದಾಗ ದರ್ಶನ್ಗೆ ಖುಷಿ ಆಯಿತು. ದರ್ಶನ್ ಶೇಕ್ ಹ್ಯಾಂಡ್ ಮಾಡಿದರು. ನನ್ನನ್ನು ತಬ್ಬಿಕೊಂಡರು. ಅವರಿಗೆ ಧ್ಯಾನ ಹೇಳಿಕೊಟ್ಟೆ’ ಎಂದಿದ್ದಾರೆ ತುರುವನೂರು ಸಿದ್ಧಾರೂಢ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.