ಕೊಟ್ಟಿದ್ದ ಹಣವನ್ನು ಕೆಲವರು ಹಂಚಿಲ್ಲ, ಅಂತವರು ಹಣವನ್ನು ನಮ್ಮ ಟ್ರಸ್ಟ್​​​ಗೆ ಕೊಟ್ಬಿಡಿ ಎಂದ ನಾರಾಯಣಗೌಡ, ವಿಡಿಯೋ ವೈರಲ್

ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಕೊಟ್ಟಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ. ನನಗೆ ಆ ಹಣ ಬೇಡ, ಟ್ರಸ್ಟ್​​ಗೆ ಕೊಡಿ ಸಮಾಜ ಸೇವೆಗೆ ಬಳಸೋಣ ಎಂದು ಆತ್ಮಾವಲೋಕನ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Follow us
|

Updated on: May 22, 2023 | 12:53 PM

ಮಂಡ್ಯ: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ. ಘಟಾನುಘಟಿ ಸಚಿವರುಗಳೇ ಪರಾಭವಗೊಂಡಿದ್ದಾರೆ. ಅದರಲ್ಲಿ ಕೆಸಿ ನಾರಾಯಣಗೌಡ ಕೂಡ ಒಬ್ಬರು. ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಕೆಸಿ ನಾರಾಯಣಗೌಡ ಸೋತಿತ್ತಿದ್ದಾರೆ. ಇದೀಗ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಕೆಸಿ ನಾರಾಯಣಗೌಡ ಆಡಿರುವ ಮಾತುಗಳು ಇದೀಗ ಫುಲ್ ವೈರಲ್ ಆಗಿದೆ. ಹೌದು.. ಸರಿಯಾಗಿ ಹಣ ಹಂಚದ ಕಾರಣ ಈ ಚುನಾವಣೆಯಲ್ಲಿ ಸೋಲಾಗಿದೆ. ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಹಂಚಿಕೆ ಮಾಡಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ ಎಂದಿದ್ದು, ಇದೀಗ ಈ ಹೇಳಿಕೆ ವೈರಲ್ ಆಗಿದೆ. ಚುನಾವಣೆಯಲ್ಲಿ ನಾನು ಸೋತಿದ್ದೇನೆ ಎಂದು ಕ್ಷೇತ್ರ ಬಿಟ್ಟು ಹೋಗಲ್ಲ. ನಾನು ಸತ್ತರೂ ಇಲ್ಲೇ ಮಣ್ಣಾಗುತ್ತೇನೆ, ಇಲ್ಲೇ ಜಾಗ ಮೀಸಲಿಟ್ಟಿದ್ದೇನೆ. ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಕೊಟ್ಟಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ. ನನಗೆ ಆ ಹಣ ಬೇಡ, ಟ್ರಸ್ಟ್​​ಗೆ ಕೊಡಿ ಸಮಾಜ ಸೇವೆಗೆ ಬಳಸೋಣ ಎಂದು ಆತ್ಮಾವಲೋಕನ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ