ಕೊಟ್ಟಿದ್ದ ಹಣವನ್ನು ಕೆಲವರು ಹಂಚಿಲ್ಲ, ಅಂತವರು ಹಣವನ್ನು ನಮ್ಮ ಟ್ರಸ್ಟ್​​​ಗೆ ಕೊಟ್ಬಿಡಿ ಎಂದ ನಾರಾಯಣಗೌಡ, ವಿಡಿಯೋ ವೈರಲ್

ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಕೊಟ್ಟಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ. ನನಗೆ ಆ ಹಣ ಬೇಡ, ಟ್ರಸ್ಟ್​​ಗೆ ಕೊಡಿ ಸಮಾಜ ಸೇವೆಗೆ ಬಳಸೋಣ ಎಂದು ಆತ್ಮಾವಲೋಕನ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮಂಡ್ಯ: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ. ಘಟಾನುಘಟಿ ಸಚಿವರುಗಳೇ ಪರಾಭವಗೊಂಡಿದ್ದಾರೆ. ಅದರಲ್ಲಿ ಕೆಸಿ ನಾರಾಯಣಗೌಡ ಕೂಡ ಒಬ್ಬರು. ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಕೆಸಿ ನಾರಾಯಣಗೌಡ ಸೋತಿತ್ತಿದ್ದಾರೆ. ಇದೀಗ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಕೆಸಿ ನಾರಾಯಣಗೌಡ ಆಡಿರುವ ಮಾತುಗಳು ಇದೀಗ ಫುಲ್ ವೈರಲ್ ಆಗಿದೆ. ಹೌದು.. ಸರಿಯಾಗಿ ಹಣ ಹಂಚದ ಕಾರಣ ಈ ಚುನಾವಣೆಯಲ್ಲಿ ಸೋಲಾಗಿದೆ. ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಹಂಚಿಕೆ ಮಾಡಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ ಎಂದಿದ್ದು, ಇದೀಗ ಈ ಹೇಳಿಕೆ ವೈರಲ್ ಆಗಿದೆ. ಚುನಾವಣೆಯಲ್ಲಿ ನಾನು ಸೋತಿದ್ದೇನೆ ಎಂದು ಕ್ಷೇತ್ರ ಬಿಟ್ಟು ಹೋಗಲ್ಲ. ನಾನು ಸತ್ತರೂ ಇಲ್ಲೇ ಮಣ್ಣಾಗುತ್ತೇನೆ, ಇಲ್ಲೇ ಜಾಗ ಮೀಸಲಿಟ್ಟಿದ್ದೇನೆ. ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಕೊಟ್ಟಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ. ನನಗೆ ಆ ಹಣ ಬೇಡ, ಟ್ರಸ್ಟ್​​ಗೆ ಕೊಡಿ ಸಮಾಜ ಸೇವೆಗೆ ಬಳಸೋಣ ಎಂದು ಆತ್ಮಾವಲೋಕನ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us