ಉಚ್ಛಾಟಿತ ಶಾಸಕನ ಸಂಪರ್ಕದಲ್ಲಿದ್ಯಾ ಬಿಜೆಪಿ ಹೈಕಮಾಂಡ್​?: ಯತ್ನಾಳ್​​ ಸ್ಫೋಟಕ ಹೇಳಿಕೆ

Edited By:

Updated on: Jan 12, 2026 | 3:13 PM

ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ. ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕೇಂದ್ರ ಹೈಕಮಾಂಡ್ ಜೊತೆ ಚರ್ಚೆ ನಡೆದಿದ್ದು, ಒಳ್ಳೆಯ, ಪ್ರಾಮಾಣಿಕ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಪ್ರಚಾರಕ್ಕೂ ಸಿದ್ಧ ಎಂದು ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.

ವಿಜಯಪುರ, ಜನವರಿ 12: ಬಿಜೆಪಿಯಿಂದ ಉಚ್ಛಾಟನೆಗೊಂಡಿರೋ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಹೊಸ ಬಾಂಬ್​​ ಸಿಡಿಸಿದ್ದಾರೆ. ಹೈಕಮಾಂಡ್​​ ನಾಯಯಕರು ತಮ್ಮ ಜೊತೆ ನೇರ ಸಂಪರ್ಕದಲ್ಲಿ ಇರೋದಾಗಿ ಯತ್ನಾಳ್​​ ಹೇಳಿರೋದೀಗ ಭಾರಿ ಕುತೂಹಲ ಕೆರಳಿಸಿದೆ. ವಿಜಯಪುರ ಶಾಸಕ ಮರಳಿ ಬಿಜೆಪಿಗೆ ಬರ್ತಾರಾ ಎನ್ನುವ ಪ್ರಶ್ನೆಗಳು ಇತ್ತೀಚೆಗೆ ಮೇಲಿಂದ ಮೇಲೆ ಕೇಳಿಬರುತ್ತಿತ್ತು. ಈ ನಡುವೆ ಉಚ್ಛಾಟಿತ ನಾಯಕನ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದೆ.
ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತೂ ಶಾಸಕ ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ.  ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡೋದಾಗಿ ತಿಳಿಸಿದ್ದಾರೆ. ಅಲ್ಲದೆ, ಪಕ್ಷದ ಅಭ್ಯರ್ಥಿಗಳು ಆಹ್ವಾನಿಸಿದರೆ ಪ್ರಚಾರಕ್ಕೂ ಹೋಗಲು ಸಿದ್ಧವಿರುವುದಾಗಿ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 12, 2026 03:13 PM
Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More