AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ

ಸಚಿವ ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ

Ganapathi Sharma
|

Updated on: Mar 31, 2025 | 11:24 AM

Share

ಸಚಿವ ಕೆಎನ್​ ರಾಜಣ್ಣ ಅವರ ಪುತ್ರ, ಪರಿಷತ್ ಸದಸ್ಯ ರಾಜೇಂದ್ರ ಕೊಲೆ ಸಂಚಿಗೆ ಸಂಬಂಧಿಸಿದ ಸ್ಫೋಟಕ ಆಡಿಯೋ ಈಗ ಬಹಿರಂಗವಾಗಿದೆ. ಆಡಿಯೋದಲ್ಲಿ ಅನೇಕ ಆಘಾತಕಾರಿ ಸಂಗತಿಗಳು ಬಯಲಾಗಿವೆ. ರಾಜೇಂದ್ರ ಕೊಲೆಗೆ ಹೇಗೆ ಸಂಚು ನಡೆದಿತ್ತು? ಎಷ್ಟು ಹಣ ನೀಡಲಾಗಿತ್ತು? ಇನ್ನೆಷ್ಟು ನೀಡುವ ಭರವಸೆ ನೀಡಲಾಗಿತ್ತು ಎಂಬ ಎಲ್ಲ ಮಾಹಿತಿ ಆಡಿಯೋದಲ್ಲಿವೆ.

ಬೆಂಗಳೂರು, ಮಾರ್ಚ್ 31: ಸಹಕಾರ ಸಚಿವ ಕೆಎನ್​ ರಾಜಣ್ಣ ಅವರ ಪುತ್ರ, ಎಂಎಲ್​ಸಿ ರಾಜೇಂದ್ರ ಕೊಲೆ ಯತ್ನ ಸಂಚಿನ ಸಂಬಂಧ ಈಗಾಗಲೇ ದೂರು ದಾಖಲಾಗಿದ್ದು, ಎಫ್​ಐಆರ್​ ಕೂಡ ದಾಖಲಾಗಿದೆ. ಈ ಮಧ್ಯೆ, ಕೊಲೆ ಸಂಚಿಗೆ ಸಂಬಂಧಿಸಿದ ಆಡಿಯೋವನ್ನೂ ಸಹ ಪೊಲೀಸರಿಗೆ ನೀಡಿದ್ದಾಗಿ ರಾಜೇಂದ್ರ ಹೇಳಿದ್ದರು. ಇದೀಗ ಆ ಆಡಿಯೋ ಬಹಿರಂಗವಾಗಿದ್ದು, ಅನೇಕ ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿವೆ. ಸೋಮ ಎಂಬಾತನ ಆಪ್ತೆ ಪುಷ್ಪಾ ಎಂಬಾಕೆ ರಾಜೇಂದ್ರ ಆಪ್ತ ರಾಕಿ ಜತೆ ನಡೆಸಿದ ಸಂಭಾಷಣೆ ‘ಟಿವಿ9’ಗೆ ಲಭ್ಯವಾಗಿದೆ. ‘‘ಜೀವ ಹೋದ್ರೂ ಬಾಯ್ಬಿಡಲ್ಲ, ಬಾಸ್​ಗಾಗಿ ಜೀವನ ಪೂರ್ತಿ ಜೈಲಲ್ಲಿರ್ತಾನೆ’’ ಇತ್ಯಾದಿಯಾಗಿ ಮಹಿಳೆ ಆಡಿರುವ ಮಾತುಗಳು ಆಡಿಯೋದಲ್ಲಿವೆ. ಇನ್ನೂ ಏನೇನು ಮಾತನಾಡಿದ್ದಾರೆ ಆ ಮಹಿಳೆ? ಇಲ್ಲಿದೆ ವಿವರ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ