AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಔಷಧಿ ಜಾಲ ಪತ್ತೆ ಪ್ರಕರಣ: ಅಜರ್ ಬೈಜಾನ್​ನಿಂದ ಕಿಂಗ್ ಪಿನ್ ಪ್ರಶಾಂತ್ ಕರೆತರಲು ಎಸ್​ಐಟಿ ತಯಾರಿ

ನಕಲಿ ಔಷಧಿ ಜಾಲ ಪತ್ತೆ ಪ್ರಕರಣ: ಅಜರ್ ಬೈಜಾನ್​ನಿಂದ ಕಿಂಗ್ ಪಿನ್ ಪ್ರಶಾಂತ್ ಕರೆತರಲು ಎಸ್​ಐಟಿ ತಯಾರಿ

ಗಣಪತಿ ಶರ್ಮಾ
|

Updated on: Aug 28, 2026 | 1:47 PM

Share

ರಾಮನಗರದ ಬಿಡದಿಯಲ್ಲಿ ಬೆಳಕಿಗೆ ಬಂದ ನಕಲಿ ಔಷಧಿ ಜಾಲ ಪ್ರಕರಣದ ಕಿಂಗ್‌ಪಿನ್ ಪ್ರಶಾಂತ್‌ನನ್ನು ಅಜರ್ ಬೈಜಾನ್​ನಿಂದ ಕರೆತರಲು ಎಸ್‌ಐಟಿ ಸಿದ್ಧತೆ ನಡೆಸಿದೆ. ಅಜರ್ ಬೈಜಾನ್​ನ ಕಸ್ಟಮ್ಸ್ ಅಧಿಕಾರಿಗಳು ಪ್ರಶಾಂತ್‌ನನ್ನು ವಶಕ್ಕೆ ಪಡೆದಿದ್ದು, ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

ಬೆಂಗಳೂರು, ಆಗಸ್ಟ್ 28: ರಾಮನಗರದ ಬಿಡದಿಯ ಫಾರ್ಮ್‌ ಹೌಸ್‌ನಲ್ಲಿ ಪತ್ತೆಯಾದ ಬೃಹತ್ ನಕಲಿ ಔಷಧಿ ಜಾಲದ ಪ್ರಕರಣವು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಜಾಲದ ಕಿಂಗ್‌ಪಿನ್ ಪ್ರಶಾಂತ್‌ನನ್ನು ಅಜರ್ ಬೈಜಾನ್​ನಿಂದ ಕರೆತರಲು ವಿಶೇಷ ತನಿಖಾ ದಳ (ಎಸ್‌ಐಟಿ) ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಎಸ್‌ಐಟಿ ನಡೆಸಿದ ತೀವ್ರ ತನಿಖೆಯ ಪರಿಣಾಮವಾಗಿ ಪ್ರಶಾಂತ್ ಅಜರ್ ಬೈಜಾನ್​ನಲ್ಲಿ ಇರುವುದು ಖಚಿತವಾಗಿದೆ. ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳು ಪ್ರಶಾಂತ್‌ನನ್ನು ವಶಕ್ಕೆ ಪಡೆದುಕೊಂಡಿದ್ದು, ಆತನ ಪಾಸ್‌ಪೋರ್ಟ್ ಅನ್ನು ಸಹ ಜಪ್ತಿ ಮಾಡಿದ್ದಾರೆ. ಈ ಕುರಿತು ಎಸ್‌ಐಟಿ, ಇಂಟರ್‌ಪೋಲ್ ಮೂಲಕ ಮಾಹಿತಿ ಪಡೆದಿದೆ.

ಆರೋಪಿ ಪ್ರಶಾಂತ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸುವ ಮೂಲಕ ಬಂಧನ ವಾರಂಟ್‌ಗೆ ಸಿದ್ಧತೆಗಳು ನಡೆಯುತ್ತಿವೆ. ಪ್ರಶಾಂತ್ ತನ್ನ ಕುಟುಂಬಸ್ಥರು ಮತ್ತು ಪತ್ನಿಯೊಂದಿಗೆ ಸಂಪರ್ಕದಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಹಲವು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಇಡೀ ಜಾಲದ ಮೂಲವನ್ನು ಪತ್ತೆಹಚ್ಚಲು ಎಸ್‌ಐಟಿ ಶ್ರಮಿಸುತ್ತಿದೆ. ಪ್ರಶಾಂತ್‌ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಈ ಪ್ರಕರಣದ ತನಿಖೆಯಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us