AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಯಾಗಿ ಚಿಕಿತ್ಸೆ ನೀಡಿಲ್ಲ.. ಕೊರೊನಾದಿಂದ ಮೃತಪಟ್ಟವನ ಸಂಬಂಧಿಕರಿಂದ ಕಲ್ಲು ತೂರಾಟ

[lazy-load-videos-and-sticky-control id=”845kqlb9c3w”] ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿಯಾಗಿದ್ದು, ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಆಸ್ಪತ್ರೆ ಎದುರು ಸಂಬಂಧಿಕರು ಕಲ್ಲು ತೂರಾಟ ಮಾಡಿ ಗಲಾಟೆ ಮಾಡಿರುವ ಘಟನೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆ ಬಳಿ ನಡೆದಿದೆ. ತಡರಾತ್ರಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಯ ಆ್ಯಂಬುಲೆನ್ಸ್ ಗಾಜು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರೊನಾಗೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ್ದಕ್ಕೆ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ. ಕೊರೊನಾ […]

ಸರಿಯಾಗಿ ಚಿಕಿತ್ಸೆ ನೀಡಿಲ್ಲ.. ಕೊರೊನಾದಿಂದ ಮೃತಪಟ್ಟವನ ಸಂಬಂಧಿಕರಿಂದ ಕಲ್ಲು ತೂರಾಟ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 31, 2020 | 11:34 AM

Share

[lazy-load-videos-and-sticky-control id=”845kqlb9c3w”]

ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿಯಾಗಿದ್ದು, ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಆಸ್ಪತ್ರೆ ಎದುರು ಸಂಬಂಧಿಕರು ಕಲ್ಲು ತೂರಾಟ ಮಾಡಿ ಗಲಾಟೆ ಮಾಡಿರುವ ಘಟನೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆ ಬಳಿ ನಡೆದಿದೆ.

ತಡರಾತ್ರಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಯ ಆ್ಯಂಬುಲೆನ್ಸ್ ಗಾಜು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರೊನಾಗೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ್ದಕ್ಕೆ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ.

ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇಂಡಿ ತಾಲೂಕಿನ ಹಡಲಸಂಗ ತಾಂಡಾದ ಕಾಶಿನಾಥ(59) ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಸಂಬಂಧಿಕರು ತಡರಾತ್ರಿ ಆಸ್ಪತ್ರೆ ಎದುರು ಗಲಾಟೆ ಮಾಡಿದ್ದಾರೆ. ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಕಲ್ಲು ತೂರಾಟ ಮಾಡಿದ್ದಾರೆ. ಸ್ಥಳಕ್ಕೆ ಗಾಂಧಿಚೌಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 8:08 am, Mon, 31 August 20

Follow Us
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಕೃಷ್ಣಬೈರೇಗೌಡ ಸುಳಿವು
ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಕೃಷ್ಣಬೈರೇಗೌಡ ಸುಳಿವು
ನೈಸ್‌ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ನೈಸ್‌ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
‘ನೀನು ಹೀರೋನೆ ಅಲ್ಲ’, ಎಂದು ನನಗೆ ಹೇಳಿದ್ದಾರೆ’: ಸತೀಶ್ ನೀನಾಸಂ
‘ನೀನು ಹೀರೋನೆ ಅಲ್ಲ’, ಎಂದು ನನಗೆ ಹೇಳಿದ್ದಾರೆ’: ಸತೀಶ್ ನೀನಾಸಂ