ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು ಆರೋಪ!
ಜಿಲ್ಲೆಯಲ್ಲಿ ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ (21) ಅವರನ್ನು ಏಪ್ರಿಲ್ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿನ ಬಳಿಕ ಮಧ್ಯರಾತ್ರಿ ಸಹಿ ಪಡೆದು ದೇಹವನ್ನು ಕಳುಹಿಸಲು ಯತ್ನಿಸಿದ್ದಾಗಿ ತಿಳಿದುಬಂದಿದೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದು, ಎಪಿಎಂಸಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ, ಏಪ್ರಿಲ್ 13: ಜಿಲ್ಲೆಯಲ್ಲಿ ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ (21) ಅವರನ್ನು ಏಪ್ರಿಲ್ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿನ ಬಳಿಕ ಮಧ್ಯರಾತ್ರಿ ಸಹಿ ಪಡೆದು ದೇಹವನ್ನು ಕಳುಹಿಸಲು ಯತ್ನಿಸಿದ್ದಾಗಿ ತಿಳಿದುಬಂದಿದೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದು, ಎಪಿಎಂಸಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
