AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಟ್ಟಲೆ ಕಾದರೂ ಚಿಕಿತ್ಸೆ ಸಿಗದೆ ವ್ಯಕ್ತಿ ಸಾವು, ಜಯದೇವ ಆಸ್ಪತ್ರೆಯಲ್ಲಿ ದಾಂಧಲೆ!

[lazy-load-videos-and-sticky-control id=”OAqKmKoS1Co”] ಬೆಂಗಳೂರು: ಕೊರೊನಾ ಕಾಲದಲ್ಲಿ ಸಂಕಷ್ಟಗಳ ಸರಮಾಲೆಯೇ ಎದುರಾಗ್ತಿದೆ. ಅದ್ರಲ್ಲೂ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡ್ತಿಲ್ಲ. ಇದ್ರಿಂದ ರೊಚ್ಚಿಗೆದ್ದ ರೋಗಿಗಳ ಸಂಬಂಧಿಕರು ಕೊರೊನಾ ವಾರಿಯರ್ ಮೇಲೆ ಮುಗಿಬಿದ್ದಿದ್ರು. ಆಸ್ಪತ್ರೆಯಲ್ಲಿ ದಾಂದಲೆ ಮಾಡಿ ಆಕ್ರೋಶ ಹೊರಹಾಕಿದ್ರು. ಆಸ್ಪತ್ರೆಯ ಗಾಜುಗಳು ಪೀಸ್.. ಪೀಸ್.. ಚೇರ್​ಗಳೆಲ್ಲ ಜಖಂ.. ಬ್ಯಾರಿಕೇಡ್ ಹಾಕಿದ್ರೂ ಜಗ್ಗುತ್ತಿಲ್ಲ.. ಪೊಲೀಸರ ಮನವೊಲಿಕೆಗೂ ಕ್ಯಾರೇ ಅಂತಿಲ್ಲ.. ಏನೇ ಮಾಡಿದ್ರೂ ಆಸ್ಪತ್ರೆ ಸಿಬ್ಬಂದಿ ಮೇಲೆ ಕೋಪ ಮಾತ್ರ ಕಮ್ಮಿ ಆಗ್ತಿಲ್ಲ. ಚಿಕಿತ್ಸೆ ಕೊಡದೆ ರೋಗಿ ಮೃತಪಟ್ಟಿದ್ದಕ್ಕೆ […]

ಗಂಟೆಗಟ್ಟಲೆ ಕಾದರೂ ಚಿಕಿತ್ಸೆ ಸಿಗದೆ ವ್ಯಕ್ತಿ ಸಾವು, ಜಯದೇವ ಆಸ್ಪತ್ರೆಯಲ್ಲಿ ದಾಂಧಲೆ!
ಆಯೇಷಾ ಬಾನು
| Edited By: |

Updated on:Aug 03, 2020 | 12:14 PM

Share

[lazy-load-videos-and-sticky-control id=”OAqKmKoS1Co”]

ಬೆಂಗಳೂರು: ಕೊರೊನಾ ಕಾಲದಲ್ಲಿ ಸಂಕಷ್ಟಗಳ ಸರಮಾಲೆಯೇ ಎದುರಾಗ್ತಿದೆ. ಅದ್ರಲ್ಲೂ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡ್ತಿಲ್ಲ. ಇದ್ರಿಂದ ರೊಚ್ಚಿಗೆದ್ದ ರೋಗಿಗಳ ಸಂಬಂಧಿಕರು ಕೊರೊನಾ ವಾರಿಯರ್ ಮೇಲೆ ಮುಗಿಬಿದ್ದಿದ್ರು. ಆಸ್ಪತ್ರೆಯಲ್ಲಿ ದಾಂದಲೆ ಮಾಡಿ ಆಕ್ರೋಶ ಹೊರಹಾಕಿದ್ರು.

ಆಸ್ಪತ್ರೆಯ ಗಾಜುಗಳು ಪೀಸ್.. ಪೀಸ್.. ಚೇರ್​ಗಳೆಲ್ಲ ಜಖಂ.. ಬ್ಯಾರಿಕೇಡ್ ಹಾಕಿದ್ರೂ ಜಗ್ಗುತ್ತಿಲ್ಲ.. ಪೊಲೀಸರ ಮನವೊಲಿಕೆಗೂ ಕ್ಯಾರೇ ಅಂತಿಲ್ಲ.. ಏನೇ ಮಾಡಿದ್ರೂ ಆಸ್ಪತ್ರೆ ಸಿಬ್ಬಂದಿ ಮೇಲೆ ಕೋಪ ಮಾತ್ರ ಕಮ್ಮಿ ಆಗ್ತಿಲ್ಲ.

ಚಿಕಿತ್ಸೆ ಕೊಡದೆ ರೋಗಿ ಮೃತಪಟ್ಟಿದ್ದಕ್ಕೆ ಆಕ್ರೋಶ! ಕೊರೊನಾ ಅಬ್ಬರ ಹೆಚ್ಚಾದಾಗಿನಿಂದ ನಾನ್ ಕೊವಿಡ್ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಕ್ತಿಲ್ಲ. ಇದ್ರಿಂದ ರೋಗಿಗಳು ನಿತ್ಯ ಪರದಾಡೋ ಪರಿಸ್ಥಿತಿ ಬಂದೊದಗಿದೆ. ಇದೇ ರೀತಿ ನಿನ್ನೆ ಸಂಜೆ ಅನ್ಸರ್ ಪಾಷಾ ಎಂಬಾತ ಜಯದೇವ ಆಸ್ಪತ್ರೆಗೆ ಬಂದಿದ್ದಾನೆ. ಇದಕ್ಕೂ ಮುನ್ನ ಇಲ್ಲಿ ಆತ ಹಲವು ಬಾರಿ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದಿದ್ರೂ ಚೇತರಿಕೆಯಾಗಿರಲಿಲ್ವಂತೆ. ನಿನ್ನೆ ಸಹ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಬಂದಿದ್ದಾರೆ. ಆದ್ರೆ ಗಂಟೆಗಟ್ಟಲೆ ಕಾದರೂ ಚಿಕಿತ್ಸೆ ನೀಡದೆ ಆಸ್ಪತ್ರೆ ಸಿಬ್ಬಂದಿ ಹೊರಗಡೆ ನಿಲ್ಲಿಸಿದ್ರಂತೆ. ಇದ್ರಿಂದ ಅನ್ಸರ್ ಪಾಷಾ ಮೃತಪಟ್ಟಿದ್ದಾನೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದಿರೋದೇ ಸಾವಿಗೆ ಕಾರಣ ಅಂತಾ ಅನ್ಸರ್ ಪಾಷಾ ಕುಟುಂಬಸ್ಥರು ರೊಚ್ಚಿಗೆದ್ರು. ಆಸ್ಪತ್ರೆಯಲ್ಲಿದ್ದ ಬ್ಯಾರಿಕೇಡ್ ತಳ್ಳಿ, ಗಾಜು, ಚೇರ್ ಹೊಡೆದು ಹಾಕಿ ಆಕ್ರೋಶ ಹೊರಹಾಕಿದ್ರು.

ಘಟನೆ ನಡೆದ ಕೂಡಲೇ ಆಸ್ಪತ್ರೆ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಆಸ್ಪತ್ರೆಗೆ ನುಗ್ಗಿ ದಾಂದಲೆ ಮಾಡಿರೋರ ವಿರುದ್ಧ ದೂರು ನೀಡಲಾಗಿದೆ. ಸದ್ಯ ಎಫ್​ಐಆರ್ ದಾಖಲಿಸಿಕೊಂಡಿರೋ ಪೊಲೀಸ್ರು ತನಿಖೆ ಶುರು ಮಾಡಿದ್ದಾರೆ.

ಕೊರೊನಾ ಆರ್ಭಟದಲ್ಲಿ ನಾನ್ ಕೊವಿಡ್ ರೋಗಿಗಳಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿರೋದು ವಿಪರ್ಯಾಸ. ಇದಕ್ಕಾಗಿ ಆಸ್ಪತ್ರೆಯಲ್ಲಿ ದಾಂದಲೆ ಮಾಡಿರೋದು ಮಾತ್ರ ತಪ್ಪು. ಕೊರೊನಾದಂತಾ ಸಂಕಷ್ಟ ಸಮಯದಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ವೈದ್ಯ ಸಿಬ್ಬಂದಿ ಕಾರ್ಯ ನಿರ್ವಹಿಸ್ತಿದ್ದಾರೆ. ಇಂತಾ ಸಮಯದಲ್ಲಿ ಹೀಗೆ ಮಾಡಿದ್ರೆ, ಅವರ ಆತ್ಮಸ್ಥೈರ್ಯ ಖಂಡಿತವಾಗಿ ಕುಗ್ಗಲಿದೆ ಅನ್ನೋದನ್ನ ಎಲ್ಲರೂ ಅರಿಯಬೇಕಿದೆ.

Published On - 7:06 am, Mon, 3 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ