Prajadhvani Yatre: ಕಲಬುರಗಿಯ ಸೇಡಂನಲ್ಲಿ ಸೆಲ್ಫೀಗಳಿಗಾಗಿ ಸಿದ್ದರಾಮಯ್ಯನವರನ್ನು ಮುತ್ತಿಗೆ ಹಾಕಿದ ಅಭಿಮಾನಿಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Feb 07, 2023 | 12:22 PM

ಸಿದ್ದರಾಮಯ್ಯನವರೊಂದಿಗೆ ಡಾ ಶರಣಪ್ರಕಾಶ್ ಪಾಟೀಲ್, ಜಮೀರ್ ಅಹ್ಮದ್, ಈಶ್ವರ್ ಖಂಡ್ರೆ ಮೊದಲಾದವರಿದ್ದರು.

ಕಲಬುರಗಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ (Siddaramaiah) ಜನಪ್ರಿಯತೆಯೇ ಹಾಗಿದೆ ಸ್ವಾಮಿ. ಅವರು ಕಲ್ಯಾಣ ಕರ್ನಾಟಕದಲ್ಲಿರಲಿ ಅಥವಾ ದಕ್ಷಿಣ; ಜನ ಅವರನ್ನು ಮುತ್ತಿಕೊಳ್ಳುತ್ತಾರೆ. ಪ್ರಸ್ತುತವಾಗಿ ಅವರು ಇತರ ಕೆಲ ನಾಯಕರೊಂದಿಗೆ ಉತ್ತರ ಕರ್ನಾಟಕದಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿದ್ದಾರೆ. ಜಿಲ್ಲೆಯ ಸೇಡಂ (Sedam) ಪಟ್ಟಣವನ್ನು ಅವರು ಕಳೆದ ರಾತ್ರಿ ತಲುಪಿದಾಗ ಉಂಟಾದ ನೂಕು ನುಗ್ಗಲು ನೋಡಿ. ಕಾರ್ಯಕರ್ತರು, ಬೆಂಬಲಿಗರು ಅವರನ್ನು ಕೆಳಗಿಳಿಯಲು ಸಹ ಬಿಡುತ್ತಿಲ್ಲ, ಸೆಲ್ಫೀಗಳಿಗಾಗಿ ಮುಗಿಬಿದ್ದಿದ್ದಾರೆ. ಸಿದ್ದರಾಮಯ್ಯನವರೊಂದಿಗೆ ಡಾ ಶರಣಪ್ರಕಾಶ್ ಪಾಟೀಲ್, ಜಮೀರ್ ಅಹ್ಮದ್ (Zameer Ahmed), ಈಶ್ವರ್ ಖಂಡ್ರೆ ಮೊದಲಾದವರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 07, 2023 11:37 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.