ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ

Updated on: Dec 13, 2024 | 6:36 PM

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ಗೆ ಇಂದು (ಡಿಸೆಂಬರ್ 13) ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜುಲೈ 11 ರಂದು ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ದರ್ಶನ್​ಗೆ ಜಾಮೀನು ದೊರೆಯುತ್ತಿದ್ದಂತೆ ಅಭಿಮಾನಿಗಳು ಸಂಭ್ರಮ ಆರಂಭಿಸಿದ್ದಾರೆ. ರಾಜರಾಜೇಶ್ವರಿ ನಗರದ ಅವರ ಮನೆಯ ಬಳಿ ಹಾರಗಳನ್ನು ಹಾಕಿ ಅಭಿಮಾನಿಗಳು ಸಂಭ್ರಮಿಸಿದ ವಿಡಿಯೋ ಇಲ್ಲಿದೆ.

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ಗೆ ಇಂದು (ಡಿಸೆಂಬರ್ 13) ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ದರ್ಶನ್ ಜೊತೆಗೆ ಪವಿತ್ರಾ ಗೌಡ, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ಪ್ರದೋಶ್, ಜಗದೀಶ್ ಅವರುಗಳಿಗೆ ಜಾಮೀನು ನೀಡಿದ್ದಾರೆ. ಜುಲೈ 11 ರಂದು ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಒಂದು ತಿಂಗಳ ಹಿಂದೆ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಇದೀಗ ನಿಯಮಿತ ಜಾಮೀನೆ ಅವರಿಗೆ ದೊರೆತಿದೆ. ಆ ಮೂಲಕ ಪ್ರಕರಣದಲ್ಲಿ ತುಸು ನಿರಾಳತೆ ಒದಗಿದೆ. ದರ್ಶನ್​ಗೆ ಜಾಮೀನು ದೊರೆಯುತ್ತಿದ್ದಂತೆ ಅಭಿಮಾನಿಗಳು ಸಂಭ್ರಮ ಆರಂಭಿಸಿದ್ದಾರೆ. ರಾಜರಾಜೇಶ್ವರಿ ನಗರದ ಅವರ ಮನೆಯ ಬಳಿ ಹಾರಗಳನ್ನು ಹಾಕಿ ಅಭಿಮಾನಿಗಳು ಸಂಭ್ರಮಿಸಿದ ವಿಡಿಯೋ ಇಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Dec 13, 2024 06:18 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More