ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು
ನಟ ದರ್ಶನ್ ಅವರನ್ನು ನೋಡಲು ಬಳ್ಳಾರಿಯ ಕೇಂದ್ರ ಕಾರಾಗೃಹದ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಜೈಲಿನಿಂದ ದರ್ಶನ್ ಹೊರಟಾಗ ಅವರ ಕಾರಿನ ಮೇಲೆ ಫ್ಯಾನ್ಸ್ ಮುಗಿಬಿದ್ದರು. ಭದ್ರತೆಯ ದೃಷ್ಟಿಯಿಂದ ಪೊಲೀಸರು ಜನರನ್ನು ಚದುರಿಸಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಜಾಮೀನು ಸಿಕ್ಕಿದ್ದಕ್ಕೆ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.
ಬರೋಬ್ಬರಿ 131 ದಿನಗಳ ಕಾಲ ಜೈಲುವಾಸ ಅನುಭವಿಸಿದ ನಟ ದರ್ಶನ್ ಅವರು ಈಗ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅವರಿಗೆ ಜಾಮೀನು ಸಿಕ್ಕಿರುವುದು ಅಭಿಮಾನಿಗಳಿಗೆ ಭಾರಿ ಸಂತಸ ತಂದಿದೆ. ಬಳ್ಳಾರಿ ಜೈಲಿನಿಂದ ದರ್ಶನ್ ಅವರು ಕಾರಿನಲ್ಲಿ ಹೊರಟಾಗ ನೂರಾರು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ದರ್ಶನ್ ಅವರನ್ನು ಹತ್ತಿರದಿಂದ ನೋಡಬೇಕು ಎಂಬ ಆಸೆಯಿಂದ ಫ್ಯಾನ್ಸ್ ಈ ರೀತಿ ನಡೆದುಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!

ಆನ್ಲೈನ್ ಗೇಮ್ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ

ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
