ಸುದೀಪ್ ಹಿಡಿದುಕೊಂಡ ಹನುಮಂತನ ಕೈಗೆ ಭಾರೀ ಬೇಡಿಕೆ; ಅಭಿಮಾನಿಗಳು ಮಾಡ್ತಿರೋದೇನು?

Updated on: Feb 24, 2025 | 8:18 AM

ಹನುಮಂತ ಅವರ ಖ್ಯಾತಿ ಹೆಚ್ಚಾಗಿದೆ. ಸುದೀಪ್ ಅವರು ಹನುಮಂತನ ಕೈ ಎತ್ತುವ ಮೂಲಕ ವಿನ್ನರ್ ಎಂದು ಘೋಷಣೆ ಮಾಡಿದರು. ಹನುಮಂತ ಈ ವಿಚಾರಕ್ಕೆ ಸಾಕಷ್ಟು ಖುಷಿಪಟ್ಟಿದ್ದಾರೆ. ಈಗ ಅವರು ಒಂದು ಅಚ್ಚರಿಯ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ.

ಹನುಮಂತ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದವರು. ಅವರ ಬದುಕನ್ನು ಬಿಗ್ ಬಾಸ್ ಬದಲಿಸಿದೆ. ಈಗ ಬರೋ ಅಭಿಮಾನಿಗಳು ಹನುಮಂತ ಅವರ ಎಡಗೈಗೆ ಮುತ್ತು ಕೊಡುತ್ತಾ ಇದ್ದಾರಂತೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ಬಿಗ್ ಬಾಸ್ ವಿನ್ನರ್ ಘೋಷಿಸುವಾಗ ಸುದೀಪ್ ಅವರು ಹನುಮಂತ ಅವರ ಕೈಯನ್ನು ಹಿಡಿದುಕೊಂಡಿದ್ದರು. ಹೀಗಾಗಿ, ಅದೇ ಕೈಗೆ ಮುತ್ತು ಕೊಡೋ ಕೆಲಸವನ್ನು ಫ್ಯಾನ್ಸ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More