ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಅವರು ಆಗಸ್ಟ್ 8ರಂದು ಬೆಂಗಳೂರಿನ ಅರಣ್ಯ ಭವನಕ್ಕೆ ಭೇಟಿ ನೀಡಿದ್ದರು. ಅವರಿಗೆ ದೊಡ್ಡ ಅಭಿಮಾನಿವರ್ಗ ಇದೆ. ಅವರು ಬೆಂಗಳೂರಿಗೆ ಬಂದಾಗ ಫ್ಯಾನ್ಸ್ ಮುತ್ತಿಕೊಳ್ಳೋಕೆ ಆರಂಭಿಸಿದ್ದರು. ಅರಣ್ಯ ಭವನದಿಂದ ಅವರು ಕಾರು ಏರುವುದಕ್ಕೆ ಸಾಕಷ್ಟು ತೊಂದರೆ ಅನುಭವಿಸಿದರು. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಬೆಂಗಳೂರಿಗೆ ಆಗಮಿಸಿದ ಬಳಿಕ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪವನ್ ಕಲ್ಯಾಣ್ ಕುಶಲೋಪರಿ ವಿಚಾರಿಸಿದರು. ಬಳಿಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಜೊತೆಗೆ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನಕ್ಕೆ ತೆರಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.