Sanjay Dutt: ಮೈಸೂರಿಗೆ ಬಂದ ಅಧೀರನ ನೋಡಲು ನೂಕು ನುಗ್ಗಲು

Updated on: Jul 18, 2023 | 9:54 AM

ಸಂಜಯ್ ದತ್ ಮೈಸೂರಿಗೆ ಆಗಮಿಸಿದ್ದರು. ಅವರನ್ನು ನೋಡಲು ಸಾಕಷ್ಟು ಮಂದಿ ಅಭಿಮಾನಿಗಳು ನೆರೆದಿದ್ದರು. ಫ್ಯಾನ್ಸ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ನಟ ಸಂಜಯ್ ದತ್ (Sanjay Dutt) ಅವರಿಗೆ ಈಗ ಕರ್ನಾಟಕದ ಜೊತೆ ನಂಟು ಬೆಳೆದಿದೆ. ‘ಕೆಜಿಎಫ್ 2’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಅವರು ಮಾಡಿದ ಅಧೀರನ ಪಾತ್ರ ಗಮನ ಸೆಳೆಯಿತು. ಅವರು ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಧ್ರುವ ಸರ್ಜಾ (Dhruva Sarja) ಅವರು ಈ ಚಿತ್ರಕ್ಕೆ ಹೀರೋ. ಇದು ಸಂಜಯ್ ದತ್ ಅವರ ಎರಡನೇ ಕನ್ನಡ ಸಿನಿಮಾ. ಅವರು ಜುಲೈ 17ರಂದು ಮೈಸೂರಿಗೆ ಆಗಮಿಸಿದ್ದರು. ಅವರನ್ನು ನೋಡಲು ಸಾಕಷ್ಟು ಮಂದಿ ಅಭಿಮಾನಿಗಳು ನೆರೆದಿದ್ದರು. ಫ್ಯಾನ್ಸ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More