AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮೆಟೊ ತೋಟಕ್ಕೆ ಪೊಲೀಸ್ ಕಾವಲು: ರೈತ ಫುಲ್ ಖುಷ್, ವಿಡಿಯೋ ನೋಡಿ

ಟೊಮೆಟೊ ತೋಟಕ್ಕೆ ಪೊಲೀಸ್ ಕಾವಲು: ರೈತ ಫುಲ್ ಖುಷ್, ವಿಡಿಯೋ ನೋಡಿ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 07, 2023 | 10:49 AM

Share

ಚಾಮರಾಜನಗರ, ಆಗಸ್ಟ್ 07: ಸೂಕ್ತ ಬೆಲೆ ಇಲ್ಲದೇ ರಸ್ತೆ ಬದಿಗೆ ಎಸೆಯಲ್ಪಡುತ್ತಿದ್ದ ಕೆಂಪು ಸುಂದರಿ ಟೊಮೆಟೊಗೆ ಕಳೆದ ಒಂದು ತಿಂಗಳಿನಿಂದ ಭಾರೀ ಡಿಮ್ಯಾಂಡ್ ಬಂದಿದೆ. ಟೆಮೆಟೊ ದರ ಗಗನಕ್ಕೇರಿದ್ದು, ರೈತರ ಫುಲ್ ಖುಷ್ ಆಗಿದ್ದಾರೆ. ಟೆಮೆಟೊ ಬೆಲೆ ಏರಿಕೆಯಾಗುತ್ತಿದ್ದಂತೆಯೇ ಕೆಂಪು ಸುಂದರಿಗೆ ಕಳ್ಳರ ಕಾಟ ಶುರುವಾಗಿದೆ. ರಸ್ತೆ ಬದಿಯಲ್ಲಿರುವ ಟೆಮೆಟೊವನ್ನು ದುಷ್ಕರ್ಮಿಗಳು ಕದ್ದುಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಟೆಮೆಟೊ ಬೆಳೆಗೆ ಸೂಕ್ತ ಬಂದೋಬಸ್ತ್​ ಒದಗಿಸಲಾಗುತ್ತಿದೆ. ಅದರಂತೆ ಚಾಮರಾಜನಗರದಲ್ಲಿ ಓರ್ವ ರೈತ ಬರೋಬ್ಬರಿ 12 ಎಕರೆ ಟೆಮೆಟೊ ಬೆಳೆದಿದ್ದು, ಇದೀಗ […]

ಚಾಮರಾಜನಗರ, ಆಗಸ್ಟ್ 07: ಸೂಕ್ತ ಬೆಲೆ ಇಲ್ಲದೇ ರಸ್ತೆ ಬದಿಗೆ ಎಸೆಯಲ್ಪಡುತ್ತಿದ್ದ ಕೆಂಪು ಸುಂದರಿ ಟೊಮೆಟೊಗೆ ಕಳೆದ ಒಂದು ತಿಂಗಳಿನಿಂದ ಭಾರೀ ಡಿಮ್ಯಾಂಡ್ ಬಂದಿದೆ. ಟೆಮೆಟೊ ದರ ಗಗನಕ್ಕೇರಿದ್ದು, ರೈತರ ಫುಲ್ ಖುಷ್ ಆಗಿದ್ದಾರೆ. ಟೆಮೆಟೊ ಬೆಲೆ ಏರಿಕೆಯಾಗುತ್ತಿದ್ದಂತೆಯೇ ಕೆಂಪು ಸುಂದರಿಗೆ ಕಳ್ಳರ ಕಾಟ ಶುರುವಾಗಿದೆ. ರಸ್ತೆ ಬದಿಯಲ್ಲಿರುವ ಟೆಮೆಟೊವನ್ನು ದುಷ್ಕರ್ಮಿಗಳು ಕದ್ದುಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಟೆಮೆಟೊ ಬೆಳೆಗೆ ಸೂಕ್ತ ಬಂದೋಬಸ್ತ್​ ಒದಗಿಸಲಾಗುತ್ತಿದೆ. ಅದರಂತೆ ಚಾಮರಾಜನಗರದಲ್ಲಿ ಓರ್ವ ರೈತ ಬರೋಬ್ಬರಿ 12 ಎಕರೆ ಟೆಮೆಟೊ ಬೆಳೆದಿದ್ದು, ಇದೀಗ ಆತನಿಗೆ ಕಳ್ಳರ ಭೀತಿ ಶುರುವಾಗಿದೆ. ಈ ಹಿನ್ನಲೆಯಲ್ಲಿ ಜಮೀನಿನ ಸುತ್ತ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಕೃಷ್ಣಶೆಟ್ಟಿ ಅವರ ಟೆಮೆಟೊ ತೋಟಕ್ಕೆ ಚಾಮರಾಜನಗರ ಪೊಲೀಸರು ಗಸ್ತು ಹೆಚ್ಚಿಸಿದ್ದಾರೆ. ಇದರಿಂದ ಕೃಷ್ಣಶೆಟ್ಟಿ ಅವರ ಪುತ್ರ, ಯುವ ರೈತ ಫುಲ್ ಖುಷ್ ಆಗಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Aug 07, 2023 10:09 AM

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More