ಹುಲಿ ದಾಳಿಯಿಂದ ರೈತ ಸಾವು: ಅರಣ್ಯ ಸಚಿವ ಈಶ್ವರ್​ ಖಂಡ್ರೆಗೆ ಮೈಸೂರಲ್ಲಿ ಘೇರಾವ್​

Updated By: ಪ್ರಸನ್ನ ಹೆಗಡೆ

Updated on: Oct 27, 2025 | 1:03 PM

ಹುಲಿ ದಾಳಿಯಿಂದ ನಿನ್ನೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ರೈತ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರದ ಎದುರು ಪ್ರತಿಭಟನೆ ನಡೆದಿದೆ. ಆಸ್ಪತ್ರೆಗೆ ಭೇಟಿ ನೀಡಿದ ಅರಣ್ಯ ಸಚಿವ ಈಶ್ವರ್​ ಖಂಡ್ರೆಗೆ ರೈತರು ಘೇರಾವ್​ ಹಾಕಿದ್ದು, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮೈಸೂರು, ಅಕ್ಟೋಬರ್​ 27: ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ರೈತ ರಾಜಶೇಖರ(58) ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್​ ಖಂಡ್ರೆಗೆ (Eshwar Khandre) ರೈತರು ಘೇರಾವ್​ ಹಾಕಿರುವ ಪ್ರಸಂಗ ನಡೆದಿದೆ. ರೈತ ರಾಜಶೇಖರ ಅವರ ಶವ ಇದ್ದ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಚಿವರು ಭೆಟಿ ನೀಡಿದ್ದರು. ಈ ವೇಳೆ ಘೇರಾವ್​ ಹಾಕಲಾಗಿದ್ದು, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಅಮಾನತು ಮಾಡಬೇಕು. ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.