ರೈತರ ನಿರಂತರ ಪ್ರತಿಭಟನೆ ಬೆನ್ನಲ್ಲೇ ಕಬ್ಬಿನ ಬೆಲೆ ನಿಗದಿ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ

Updated on: Nov 03, 2025 | 4:56 PM

ಕಬ್ಬಿನ ಬೆಲೆ ನಿಗದಿಗಾಗಿ ಬೆಳಗಾವಿಯಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಸಂಬಂಧ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದು, ನಿನ್ನೆ ಜಿಲ್ಲಾಧಿಕಾರಿ ಮಾತನಾಡಿದ್ದಾರೆ. ನಿರ್ಣಾಯಕ ಹಂತಕ್ಕೆ ಬಂದಿದೆ.ಇವತ್ತು ಸಂಜೆ ಗೊತ್ತಾಗಲಿದೆ. ಎಫ್.ಆರ್.ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಅದರೂ ಕೂಡಾ ಯಾವ ಕಾರ್ಖಾನೆಯಲ್ಲಿ ರಿಕವರಿ ಹೆಚ್ಚಿದೆ ಅಲ್ಲಿ ರೈತರಿಗೆ ಹೆಚ್ಚಿಗೆ ಕೊಡಿಸಲು ಪ್ರಯತ್ನ ಮಾಡಿದ್ದೇವೆ. 3200 ರುಪಾಯಿ ದರ ಕೊಡಲು ಒಪ್ಪಿಕೊಂಡಿದ್ದಾರೆ. ಇವತ್ತು ಸಂಜೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಸಭೆ ಕರೆದು ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಹಾವೇರಿ, (ನವೆಂಬರ್ 03): ಕಬ್ಬಿನ ಬೆಲೆ ನಿಗದಿಗಾಗಿ ಬೆಳಗಾವಿಯಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಸಂಬಂಧ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದು, ನಿನ್ನೆ ಜಿಲ್ಲಾಧಿಕಾರಿ ಮಾತನಾಡಿದ್ದಾರೆ. ನಿರ್ಣಾಯಕ ಹಂತಕ್ಕೆ ಬಂದಿದೆ.ಇವತ್ತು ಸಂಜೆ ಗೊತ್ತಾಗಲಿದೆ. ಎಫ್.ಆರ್.ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಅದರೂ ಕೂಡಾ ಯಾವ ಕಾರ್ಖಾನೆಯಲ್ಲಿ ರಿಕವರಿ ಹೆಚ್ಚಿದೆ ಅಲ್ಲಿ ರೈತರಿಗೆ ಹೆಚ್ಚಿಗೆ ಕೊಡಿಸಲು ಪ್ರಯತ್ನ ಮಾಡಿದ್ದೇವೆ. 3200 ರುಪಾಯಿ ದರ ಕೊಡಲು ಒಪ್ಪಿಕೊಂಡಿದ್ದಾರೆ. ಇವತ್ತು ಸಂಜೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಸಭೆ ಕರೆದು ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More