ಗೊಂದಲದ ಗೂಡಾದ ಕುಂದಗೋಳ ಜನಸಂಪರ್ಕ ಸಭೆ: ವೇದಿಕೆಯಲ್ಲೇ ಅಧಿಕಾರಿಗಳಿಗೆ ಸಚಿವ ಸಂತೋಷ್​​ ಲಾಡ್​​ ತರಾಟೆ

Edited By:

Updated on: Apr 28, 2026 | 4:55 PM

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಎದುರೇ ರೈತರೊಬ್ಬರು ತಮ್ಮ ಸಮಸ್ಯೆಗಳ ಬಗ್ಗೆ ಕೂಗಾಡಿದ್ದಾರೆ. ವೈಯಕ್ತಿಕವಾಗಿ ಅರ್ಜಿ ಸಲ್ಲಿಸುವಂತೆ ಅಧಿಕಾರಿಗಳು ಸೂಚಿಸಿದರೂ, ರೈತ ತಮ್ಮ ಅಳಲನ್ನು ಸಭೆಯಲ್ಲಿ ವ್ಯಕ್ತಪಡಿಸಲು ಪ್ರಯತ್ನಿಸಿದ ಪ್ರಸಂಗ ನಡೆದಿದೆ. ಈ ಘಟನೆಯು ಸಭೆಯಲ್ಲಿ ಅಲ್ಪ ಗೊಂದಲಕ್ಕೆ ಕಾರಣವಾಯಿತು.

ಧಾರವಾಡ, ಏಪ್ರಿಲ್​​ 28: ಕುಂದಗೋಳ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ನಡೆದ  ಜನಸಂಪರ್ಕ ಸಭೆಯ ಮಧ್ಯೆ, ರೈತರೊಬ್ಬರು ತಮ್ಮ ಸಮಸ್ಯೆಗಳ ಕುರಿತು ಕೂಗಾಡಿದ್ದಾರೆ. ಅಧಿಕಾರಿಗಳು ವೈಯಕ್ತಿಕವಾಗಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದರೂ, ರೈತರು ಸಭೆಯಲ್ಲಿಯೇ ತಮ್ಮ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕೇಳುವ ಪ್ರಯತ್ನ ಮಾಡಿದ ಪ್ರಸಂಗ ನಡೆದಿದೆ. ಈ ಘಟನೆಯು ಕುಂದಗೋಳದ ಜನಸಂಪರ್ಕ ಸಭೆಯಲ್ಲಿ ಅಲ್ಪ ಕಾಲ ಗೊಂದಲಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಭೆ ಗೊಂದಲದ ಗೂಡಾದ ಕಾರಣ, ವೇದಿಕೆಯಲ್ಲೇ ಅಧಿಕಾರಿಗಳನ್ನು ಸಚಿವ ಸಂತೋಷ್ ಲಾಡ್ ತರಾಟೆಗೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us