ಬಾರದ ಮಳೆ: ವರುಣದೇವನ ಮೊರೆ ಹೋದ ತುಮಕೂರು ರೈತರು

Edited By:

Updated on: Aug 21, 2023 | 8:54 AM

ಮಳೆರಾಯ ಮತ್ತೆ ಕೃಪೆ ತೋರಪ್ಪ.. ಬೆಳೆಗಳಿಗೆ ನೀರುಣಿಸಪ್ಪ ಅಂತ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಮಿಡಿಗೇಶಿ ಸಮೀಪದ ಲಕ್ಲಿಹಟ್ಟಿ ರೈತರು ವರುಣದೇವನಲ್ಲಿ ಪಾರ್ಥಿಸಿದ್ದಾರೆ.

ತುಮಕೂರು: ಜುಲೈ ಆರಂಭದ ತಿಂಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಿ (Rain) ರೈತರ ಮೊಗದಲ್ಲಿ ಸಂತಸ ಮೂಡಿಸಿತ್ತು. ರೈತರು ಬೆಳೆಗಳನ್ನು ಬಿತ್ತಿದ್ದಾರೆ. ಆದರೆ ಇದೀಗ ಕಳೆದ 20 ದಿನಗಳಿಂದ ಮಳೆಯಾಗಿಲ್ಲ. ಇದರಿಂದ ಹೊಲ, ಗದ್ದೆಗಳಿಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದು, ರೈತ ತಲೆ ಮೇಲೆ ಕೈಹೊತ್ತು ಕುಂತಿದ್ದಾನೆ. ಹೀಗಾಗಿ ಮಳೆರಾಯ ಮತ್ತೆ ಕೃಪೆ ತೋರಪ್ಪ.. ಬೆಳೆಗಳಿಗೆ ನೀರುಣಿಸಪ್ಪ ಅಂತ ತುಮಕೂರು (Tumakuru) ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಮಿಡಿಗೇಶಿ ಸಮೀಪದ ಲಕ್ಲಿಹಟ್ಟಿ ರೈತರು ವರುಣದೇವನಲ್ಲಿ ಪಾರ್ಥಿಸಿದ್ದಾರೆ. ಬೆಳೆದ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ರೈತರು ಮಳೆರಾಯನಿಗೆ ಮೊರೆ ಹೋಗಿದ್ದಾರೆ. ಮಳೆರಾಯನ ಮಣ್ಣಿನ ಆಕೃತಿ ಮಾಡಿ ಬಾರಯ್ಯ ಮಳೆರಾಯ ಎಂದು ಪೂಜೆ ಮಾಡಿದ್ದಾರೆ. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಳೆರಾಯನ ಹೊತ್ತು ಮೆರವಣಿಗೆ ಮಾಡಿದ್ದಾರೆ.

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More