ಕೆರೆ ತುಂಬಿಸುವ ಯೋಜನೆಗೆ ಚಾಲನೆ, ನೀರು ಕಂಡು ಕುಣಿದು ಸಂಭ್ರಮಿಸಿದ ಗ್ರಾಮಸ್ಥರು!

Updated on: Oct 10, 2024 | 12:25 PM

ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಗೊಲ್ಲರಹಟ್ಟಿ ಕೆರೆ, ಭರಮಸಮುದ್ರ ಕೆರೆ, ಸಿದ್ದಮ್ಮನಹಳ್ಳಿ ಕೆರೆ ಹಾಗೂ ಕಸುವಿನಹಳ್ಳಿ ಕೆರೆಗಳಿಗೆ ತುಂಗಭದ್ರ ನದಿನೀರು ಹರಿದುಬಂದಿದೆ. ಕೊರತೆ ಮಳೆ ಮತ್ತು ಬೇಸಾಯಕ್ಕೆ ನೀರಿಲ್ಲದೆ ಸಂಕಟ ಅನುಭವಿಸುತ್ತಿದ್ದ ರೈತಾಪಿ ಸಮುದಾಯ ಇನ್ನು ಮುಂದೆ ನಿರಾಳವಾಗಿ ಕೃಷಿ ಚಟುವಟಿಕೆ ನಡೆಸಲಿದ್ದಾರೆ.

ದಾವಣಗೆರೆ: ತುಂಗಭದ್ರ ನದಿಯಿಂದ ಜಿಲ್ಲೆಯ ಜಗಳೂರು ವಿಧಾನಸಭಾ ಕ್ಷೇತ್ರದ 57 ಕೆರೆಗಳಿಗೆ ನೀರು ತುಂಬಿಸೋದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದು. ಈ ಯೋಜನೆಗೆ ಚಾಲನೆ ದೊರೆತಿದ್ದು ಗ್ರಾಮವೊಂದಕ್ಕೆ ನೀರು ಹರಿದು ಬಂದಿರುವುದನ್ನು ಅಲ್ಲಿನ ನಿವಾಸಿಗಳು ಸ್ವಾಗತಿದ್ದು ಹೀಗೆ. ಗ್ರಾಮದ ಒಬ್ಬ ಹಿರಿಯ ನಾಗರಿಕ ತುಂಗಭದ್ರ ನದಿ ನೀರನ್ನು ಕಂಡು ಕುಣಿದು ಕುಪ್ಪಳಿಸುತ್ತಾ ಸಂಭ್ರಮಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಐದು ದಶಕಗಳ ಹೋರಾಟದ ಫಲವಾಗಿ ಕೆರೆಗೆ ಬಂತು ತುಂಗಭದ್ರಾ ನದಿ ನೀರು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More