ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು

Edited By: ವಿವೇಕ ಬಿರಾದಾರ

Updated on: Feb 25, 2025 | 12:57 PM

ಧಾರವಾಡದಿಂದ ವಿಜಯಪುರಕ್ಕೆ ತೆರಳುತ್ತಿದ್ದ ಐದು ಮಂದಿ ಇದ್ದ ಕಾರು ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಹೆದ್ದಾರಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ ಮತ್ತು ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಸಿಸಿಟಿವಿ ದೃಶ್ಯಗಳು ಹೊರಬಿದ್ದಿವೆ. ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರು ಚಾಲಕ ಮೊಹಮ್ಮದ್​ ಯೂನಿಸ್(20) ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯವಾಗಿದೆ. ಸೋಮವಾರ (ಫೆ.24) ರಂದು ಐವರು ಸ್ನೇಹಿತರು ಕಾರಿನಲ್ಲಿ ಧಾರವಾಡದಿಂದ ದೇವನಹಳ್ಳಿಯ ವಿಜಯಪುರಕ್ಕೆ ಹೊರಟಿದ್ದರು. ಕಾರು ಅಪಘಾತದ ಭೀಕರ ದೃಶ್ಯ ಹೆದ್ದಾರಿ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

Loading...
Unable to load recommendations.
Follow Us