ಉಗ್ರರ ದಾಳಿಗೆ ಬಲಿಯಾದ ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

Updated on: Apr 25, 2025 | 10:29 PM

ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಅಂತ್ಯಕ್ರಿಯೆ ನಡೆದಿದ್ದು, ಅವರ ಅಸ್ತಿಯನ್ನು ಇಂದು ಹರಿದ್ವಾರದ ಗಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ಅಸ್ತಿ ವಿಸರ್ಜನೆ ಮಾಡಿದ ಬಳಿಕ ತಮ್ಮ ಮಗನನ್ನು ನೆನೆದು ವಿನಯ್ ಅವರ ತಂದೆ ಬಿಕ್ಕಿ ಬಿಕ್ಕಿ ಅಳುತ್ತಾ ನಿಂತಿರುವ ದೃಶ್ಯ ಎಂಥವರ ಕಣ್ಣನ್ನೂ ತೇವಗೊಳಿಸುತ್ತದೆ. ಹರಿಯಾಣದ ಮೂಲದ ವಿನಯ್ ನರ್ವಾಲ್ ಅವರಿಗೆ ಮದುವೆಯಾಗಿ ಕೇವಲ 1 ವಾರವಾಗಿತ್ತು. ತಮ್ಮ ಪತ್ನಿಯೊಂದಿಗೆ ಕಾಶ್ಮೀರಕ್ಕೆ ಹನಿಮೂನ್​ ಹೋಗಿದ್ದರು. ಈ ವೇಳೆ ಲೆಫ್ಟಿನೆಂಟ್ ನರ್ವಾಲ್ ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು.

ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಅಂತ್ಯಕ್ರಿಯೆ ನಡೆದಿದ್ದು, ಅವರ ಅಸ್ತಿಯನ್ನು ಇಂದು ಹರಿದ್ವಾರದ ಗಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ಅಸ್ತಿ ವಿಸರ್ಜನೆ ಮಾಡಿದ ಬಳಿಕ ತಮ್ಮ ಮಗನನ್ನು ನೆನೆದು ವಿನಯ್ ಅವರ ತಂದೆ ಬಿಕ್ಕಿ ಬಿಕ್ಕಿ ಅಳುತ್ತಾ ನಿಂತಿರುವ ದೃಶ್ಯ ಎಂಥವರ ಕಣ್ಣನ್ನೂ ತೇವಗೊಳಿಸುತ್ತದೆ. ಹರಿಯಾಣದ ಮೂಲದ ವಿನಯ್ ನರ್ವಾಲ್ ಅವರಿಗೆ ಮದುವೆಯಾಗಿ ಕೇವಲ 1 ವಾರವಾಗಿತ್ತು. ತಮ್ಮ ಪತ್ನಿಯೊಂದಿಗೆ ಕಾಶ್ಮೀರಕ್ಕೆ ಹನಿಮೂನ್​ ಹೋಗಿದ್ದರು. ಈ ವೇಳೆ ಲೆಫ್ಟಿನೆಂಟ್ ನರ್ವಾಲ್ ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More