ಈ ವರ್ಷದ ಡಿಸೆಂಬರ್ ಇಲ್ಲವೇ ಜನೆವರಿ-2024ರಲ್ಲಿ ನಮ್ಮ 5ನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸುತ್ತೇವೆ: ಸಿದ್ದರಾಮಯ್ಯ, ಸಿಎಂ
ಇಷ್ಟೆಲ್ಲ ಯೋಜನೆಗಳನ್ನು ಜಾರಿಗೆ ತಂದರೂ ಸರ್ಕಾರದ ಬೇರಾವುದೇ ಕಾರ್ಯಕ್ರಮ ನಿಂತಿಲ್ಲ, ವಿರೋಧ ಪಕ್ಷದ ನಾಯಕರು ಸುಖಾಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. 5 ಗ್ಯಾರಂಟಿಗಳಿಗೆ ಸಾಕಷ್ಟು ಹಣ ವ್ಯಯಾವಾಗೋದು ಸತ್ಯ, ಆದರೆ ತಾವು ಎಲ್ಲ ಇಲಾಖೆಗಳಿಗೆ, ಸರ್ಕಾರದ ಉಳಿದೆಲ್ಲ ಯೋಜನೆಗಳಿಗೆ ಹಣ ತೆಗೆದಿರಿಸಲಾಗಿದೆ ಎಂದು ಅವರು ಹೇಳಿದರು.
ಮೈಸೂರು: ನಾಲಕ್ಕಾಯಿತು, ಇನ್ನೊಂದುಳಿಯಿತು, ಅದ್ಯಾವಾಗ? ಹೌದು ಸ್ವಾಮಿ ನಾವು ಸಿದ್ದರಾಮಯ್ಯ ಸರ್ಕಾರ (Siddaramaiah government) ಜನತೆಗೆ ನೀಡಿದ ಗ್ಯಾರಂಟಿಗಳ ಬಗ್ಗೆ ಮಾತಾಡುತ್ತಿದ್ದೇವೆ. ಅದಕ್ಕೂ ಮುಖ್ಯಮಂತ್ರಿಯವರೇ ಉತ್ತರ ನೀಡಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಗೆ (Gruha Lakshmi Scheme) ರಾಹುಲ್ ಗಾಂಧಿ (Rahul Gandhi) ಚಾಲನೆ ನೀಡಿದ ಬಳಿಕ ಕಾರ್ಯಕ್ರಮದಲ್ಲಿ ಮಾತಾಡಿದ ಸಿದ್ದರಾಮಯ್ಯ ಈ ವರ್ಷದ ಡಿಸೆಂಬರ್ ಇಲ್ಲವೇ ಮುಂದಿನ ವರ್ಷದ ಜನೆವರಿಯಲ್ಲಿ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು. ಇಷ್ಟೆಲ್ಲ ಯೋಜನೆಗಳನ್ನು ಜಾರಿಗೆ ತಂದರೂ ಸರ್ಕಾರದ ಬೇರಾವುದೇ ಕಾರ್ಯಕ್ರಮ ನಿಂತಿಲ್ಲ, ವಿರೋಧ ಪಕ್ಷದ ನಾಯಕರು ಸುಖಾಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. 5 ಗ್ಯಾರಂಟಿಗಳಿಗೆ ಸಾಕಷ್ಟು ಹಣ ವ್ಯಯಾವಾಗೋದು ಸತ್ಯ, ಆದರೆ ತಾವು ಎಲ್ಲ ಇಲಾಖೆಗಳಿಗೆ, ಸರ್ಕಾರದ ಉಳಿದೆಲ್ಲ ಯೋಜನೆಗಳಿಗೆ ಹಣ ತೆಗೆದಿರಿಸಲಾಗಿದೆ ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

