ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ

Updated on: Oct 21, 2024 | 3:43 PM

ಜಗದೀಶ್ ಅವರು ಎಲಿಮಿನೇಟ್ ಆದ ಬಳಿಕ ಬಿಗ್ ಬಾಸ್​ ಮನೆ ಸೈಲೆಂಟ್ ಆಗಿತ್ತು. ಆದರೆ ಈಗ ಮತ್ತೆ ಜಗಳ ಶುರುವಾಗಿದೆ. ಕ್ಯಾಪ್ಟನ್ ಆಗಲು ಬಿಗ್ ಬಾಸ್ ನೀಡಿದ್ದ ಟಾಸ್ಕ್ ಆಡುವ ವೇಳೆ ಶಿಶಿರ್ ಮತ್ತು ಉಗ್ರಂ ಮಂಜು ಅವರು ಬಡಿದಾಡಿಕೊಂಡಿದ್ದಾರೆ. ಇದರ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಇಂದು (ಅ.21) ಈ ಸಂಚಿಕೆ ಪ್ರಸಾರ ಆಗಲಿದೆ.

ದಿನ ಕಳೆದಂತೆಲ್ಲ ಬಿಗ್ ಬಾಸ್​ ಮನೆಯಲ್ಲಿ ಟೆನ್ಷನ್ ಹೆಚ್ಚುತ್ತಿದೆ. ಶಿಶಿರ್ ಬಳಿಕ ಅಲ್ಪಾವಧಿಗೆ ಹನುಮಂತ ಕ್ಯಾಪ್ಟನ್ ಆಗಿದ್ದರು. ಈಗ ಹೊಸ ಕ್ಯಾಪ್ಟನ್ ಆಯ್ಕೆಗೆ ಟಾಸ್ಕ್ ನೀಡಲಾಗಿದೆ. ಈ ವೇಳೆ ಶಿಶಿರ್ ಮತ್ತು ಉಗ್ರಂ ಮಂಜು ನಡುವೆ ಜಗಳ ನಡೆದಿದೆ. ಇಬ್ಬರೂ ಬಡಿದಾಡಿಕೊಂಡಿದ್ದಾರೆ. ಟಾಸ್ಕ್​ ಸಲುವಾಗಿ ನೀಡಿದ್ದ ವಸ್ತುಗಳಿಗೂ ಹಾನಿ ಮಾಡಲಾಗಿದೆ. ಇದಕ್ಕೆಲ್ಲ ಖಂಡಿತವಾಗಿಯೂ ಬಿಗ್ ಬಾಸ್​ ಶಿಕ್ಷೆ ನೀಡಲಿದ್ದಾರೆ. ಎಲ್ಲರ ಜಗಳ ನೋಡಿ ವೈಲ್ಡ್ ಕಾರ್ಡ್ ಸ್ಪರ್ಧಿ ಹನುಮಂತನಿಗೆ ಚಿಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More