ಕುಟುಂಬಗಳ ನಡುವೆ ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​

Updated on: Jan 09, 2026 | 4:55 PM

8 ಎಕರೆ ಗದ್ದೆ ಸಲುವಾಗಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಕೆಸರು ಗದ್ದೆಯಲ್ಲಿಯೇ ಪರಸ್ಪರ ಬಡಿದಾಡಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವೇರಿ, ಜನವರಿ 09: ಆಸ್ತಿ ವ್ಯಾಜ್ಯ ಹಿನ್ನೆಲೆ ಕೆಸರು ಗದ್ದೆಯಲ್ಲೇ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ನಡೆದಿದೆ. 8 ಎಕರೆ ಗದ್ದೆ ಸಲುವಾಗಿ ಕೋಟೆಗೌಡ ಮತ್ತು ಚನ್ನಗೌಡ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ‌ಈ ವೇಳೆ ಎರಡೂ ಕುಟುಂಬದ ಸದಸ್ಯರಿಗೆ ಗಂಭೀರ ಗಾಯಗಳಾಗಿವೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 09, 2026 04:53 PM
Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More