ಫಿಲ್ಮ್​ ಚೇಂಬರ್​ ಚುನಾವಣೆಯಲ್ಲಿ ಗೆಲುವಿಗಾಗಿ ದೇವರ ಮೊರೆ ಹೋದ ಭಾ.ಮ. ಹರೀಶ್​; ಇಲ್ಲಿದೆ ವಿಡಿಯೋ

Edited By:

Updated on: May 28, 2022 | 9:56 AM

Film Chamber Election: ಎಲೆಕ್ಷನ್​ ಆರಂಭಕ್ಕೆ ಕೆಲವೇ ಗಂಟೆಗಳು ಇರುವಾಗ ನಿರ್ಮಾಪಕ ಭಾ.ಮ. ಹರೀಶ್​ ಅವರು ದೇವರ ಮೊರೆ ಹೋಗಿದ್ದಾರೆ. ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber Of Commerce) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು (ಮೇ 28) ನಡೆಯಲಿದೆ. ಮತದಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ಸಾ.ರಾ. ಗೋವಿಂದು ಮತ್ತು ಭಾ.ಮ. ಹರೀಶ್ (Ba Ma Harish)​ ಅವರು ಸ್ಪರ್ಧಿಸುತ್ತಿದ್ದಾರೆ. ಬೆಂಗಳೂರಿನ ಗುರುರಾಜ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಮತದಾನ ಆರಂಭ ಆಗಲಿದ್ದು, ಸಂಜೆ 6 ಗಂಟೆವರೆಗೂ ನಡೆಯಲಿದೆ. ರಾತ್ರಿ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಅಧ್ಯಕ್ಷರ ಜೊತೆಗೆ ಪದಾಧಿಕಾರಿಗಳ ಆಯ್ಕೆ ಕೂಡ ಇಂದು ನಡೆಯಲಿದೆ. ಎಲೆಕ್ಷನ್​ (Film Chamber Election) ಆರಂಭಕ್ಕೆ ಕೆಲವೇ ಗಂಟೆಗಳು ಇರುವಾಗ ನಿರ್ಮಾಪಕ ಭಾ.ಮ. ಹರೀಶ್​ ಅವರು ದೇವರ ಮೊರೆ ಹೋಗಿದ್ದಾರೆ. ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Follow Us
Web contact

TV9 Kannada

Read More