ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

| Updated By: ಗಂಗಾಧರ​ ಬ. ಸಾಬೋಜಿ

Updated on: Sep 20, 2024 | 9:54 PM

ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್, ಔರಂಗಜೇಬ್ ಕುರಿತು ಅಶ್ಲೀಲ ಪದ‌ ಬಳಕೆ ಹಿನ್ನಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುಧೋಳ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಎಸ್​ಪಿ ಅಮರನಾಥರೆಡ್ಡಿ ಹೇಳಿದ್ದಿಷ್ಟು.

ಬಾಗಲಕೋಟೆ, ಸೆಪ್ಟೆಂಬರ್ 20: ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಹಿನ್ನಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧ ಜಿಲ್ಲೆಯ ಮುಧೋಳ ಠಾಣೆಯಲ್ಲಿ ಸೆಕ್ಷನ್ 264/24, 16(1)a, 353(2)BNS ಅಡಿ ಎಫ್​ಐಆರ್ ದಾಖಲಾಗಿದೆ. ಮುಧೋಳ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿದ್ದಾರೆ. ನಿನ್ನೆ ಜನತಾರಾಜ್ ಗಣೇಶ ವಿಸರ್ಜನೆ ವೇಳೆ ಯತ್ನಾಳ್ ಭಾಷಣ ಮಾಡಿದ್ದು, ಟಿಪ್ಪು ಸುಲ್ತಾನ್, ಔರಂಗಜೇಬ್ ಕುರಿತು ಅಶ್ಲೀಲ ಪದ‌ ಬಳಕೆ ಮಾಡಿದ್ದರು. ಈ ಬಗ್ಗೆ ಬಾಗಲಕೋಟೆ ಎಸ್​ಪಿ ಅಮರನಾಥರೆಡ್ಡಿ ಹೇಳಿದ್ದಿಷ್ಟು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Follow us on