ಬಾಗಲಕೋಟೆ, ಸೆಪ್ಟೆಂಬರ್ 20: ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಹಿನ್ನಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧ ಜಿಲ್ಲೆಯ ಮುಧೋಳ ಠಾಣೆಯಲ್ಲಿ ಸೆಕ್ಷನ್ 264/24, 16(1)a, 353(2)BNS ಅಡಿ ಎಫ್ಐಆರ್ ದಾಖಲಾಗಿದೆ. ಮುಧೋಳ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿದ್ದಾರೆ. ನಿನ್ನೆ ಜನತಾರಾಜ್ ಗಣೇಶ ವಿಸರ್ಜನೆ ವೇಳೆ ಯತ್ನಾಳ್ ಭಾಷಣ ಮಾಡಿದ್ದು, ಟಿಪ್ಪು ಸುಲ್ತಾನ್, ಔರಂಗಜೇಬ್ ಕುರಿತು ಅಶ್ಲೀಲ ಪದ ಬಳಕೆ ಮಾಡಿದ್ದರು. ಈ ಬಗ್ಗೆ ಬಾಗಲಕೋಟೆ ಎಸ್ಪಿ ಅಮರನಾಥರೆಡ್ಡಿ ಹೇಳಿದ್ದಿಷ್ಟು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.